ದಾವಣಗೆರೆ ಮೇಯರ್ ಗದ್ದುಗೆ : ಮೋಸದಿಂದ ಪಟ್ಟ ಗಿಟ್ಟಿಸಿಕೊಂಡ ಬಿಜೆಪಿ ; ಶಾಮನೂರು ಶಿವಶಂಕರಪ್ಪ

IMG-20220225-WA0017

ದಾವಣಗೆರೆ: ಇಂದು ನಡೆದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೋಸದಿಂದ ಮೇಯರ್ ಪಟ್ಟ ಗಿಟ್ಟಿಸಿಕೊಂಡಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸುಳ್ಳು, ಮೋಸ, ವಂಚಿಸುವಲ್ಲಿ ಬಿಜೆಪಿ ನಾಯಕರು ನಿಸ್ಸೀಮರು. ಈ ಚುನಾವಣೆಯೂ ಅದೇ ರೀತಿ ನಡೆದಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಮಾತನಾಡಿ, ಅಧಿಕಾರ ಆಸೆಗಾಗಿ ಇಲ್ಲಿನ ನಿವಾಸಿಗಳಲ್ಲದ ಎಂಎಲ್ ಸಿಗಳು ಮತ ಹಾಕುವುದು ತಪ್ಪು. ಇಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರ ತಪ್ಪಿದೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!