ದಾವಣಗೆರೆ : ಭೀಕರ ಅಪಘಾತ : ಹಾಲುವರ್ತಿ ಗ್ರಾಮದ ಹನುಮಂತಪ್ಪ ಮತ್ತು ಕಿರಣ್‌ಕುಮಾರ್ ವಿಧಿವಶ

WhatsApp Image 2022-03-01 at 15.48.30

ದಾವಣಗೆರೆ : ದಾವಣಗೆರೆ ತಾಲೂಕಿನ ಆನಗೋಡು ಬಳಿಯಿರುವ ಹುಳುಪಿನ ಕಟ್ಟೆ ಫ್ಲೈ ಓವರ್ ಮೇಲೆ ನಿನ್ನೆ ರಾತ್ರಿ 11:50ಕ್ಕೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾಲುವರ್ತಿ ಗ್ರಾಮದ ಹನುಮಂತಪ್ಪ ಮತ್ತು ಕಿರಣ್ ಕುಮಾರ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಲಾರಿಯಲ್ಲಿದ್ದ ಒಬ್ಬ ಹೆಣ್ಣುಮಗಳಿಗೆ ಕಾಲು ತುಂಡಾಗಿದ್ದು ಚಿಕಿತ್ಸೆಗೆಂದು ದಾವಣಗೆರೆಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅವರು ಕೂಡ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ನಿನ್ನೆ ರಾತ್ರಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ನಿಂಗನಗೌಡ ನೆಗಳೂರ್, ಸಿಬ್ಬಂದಿಗಳಾದ ಪ್ರಕಾಶ್, ರಂಗಸ್ವಾಮಿ, ಅಣ್ಣಯ್ಯ, ನೂರುಲ್ಲಾ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಮೃತಪಟ್ಟವರನ್ನು, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!