ಮಹಾಂತೇಶ್ ಭೀಳಗಿ ವರ್ಗಾವಣೆ.! ಶಿವಾನಂದ ಕಪಾಶಿ ದಾವಣಗೆರೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ.!

Davanagere new dc shivanand kapashi

ದಾವಣಗೆರೆ: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಪಾಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ತಕ್ಷಣದಿಂದಲೇ ಆದೇಶ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ.

ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮಹಾಂತೇಶ್ ಬೀಳಗಿ ಅವರಿಗೆ ವರ್ಗಾವಣೆ ಆಗಿದ್ದು, ಯಾವುದೇ ಸ್ಥಳ ತೋರಿಸಿಲ್ಲ. ಈವರೆಗೆ ಬೆಂಗಳೂರಿನ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಶಿವಾನಂದ ಕಾಪಶಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ನಾಗಪ್ಪ ಎಸ್.ಪರೀಟ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!