ಜೂಜು ಅಡ್ಡೆ ಮೇಲೆ ಡಿ ಸಿ ಆರ್ ಬಿ ಪೋಲಿಸ್ ದಾಳಿ ಒಂದು ಲಕ್ಷಕ್ಕೂ ಅಧಿಕ ಹಣ ವಶ

ದಾವಣಗೆರೆ: ದಿನಾಂಕ 02-03-2022 ರಂದು ಜಿಲ್ಲಾ ಪೊಲೀಸ್ ಕಛೇರಿಯ ಡಿ ಸಿ ಆರ್ ಬಿ ಘಟಕದ ಪೊಲೀಸ್ ಉಪ ಧೀಕ್ಷಕರಾದ ಶ್ರೀ ಬಿ. ಎಸ್. ಬಸವರಾಜ್ ಮತ್ತು ಅಧಿಕಾರಿ ಸಿಬ್ಬಂದಿಗಳು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಿದರಕೆರೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 8 ಜನ ವ್ಯಕ್ತಿಗಳನ್ನು ಹಿಡಿದು ಅವರಿಂದ ಒಟ್ಟು 1 ಲಕ್ಷದ 2 ಸಾವಿರ ನಗದು ಹಣ ಮತ್ತು 52 ಇಸ್ಪೀಟ್ ಕಾರ್ಡ್ಗಳನ್ನು ಅಮಾನತ್ತುಪಡಿಸಿಕೊಂಡಿದ್ದು, ಈ ಬಗ್ಗೆ ಜಗಳೂರು ಪೊಲೀಸ್ ಠಾಣೆ ಗುನ್ನೆ ನಂ 50/2022 ಕಲಂ 87 ಕೆಪಿ ಆಕ್ಟ್ ರೀತ್ಯಾ ಪ್ರಕರಣ ದಾಖಲಿಸಿರುತ್ತದೆ. ಹಾಗೂ
ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಿಂಗ್ ರೋಡ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದ ವ್ಯಕ್ತಿಗಳನ್ನು ಹಿಡಿದು ಅವರಿಂದ 10430 ರೂ. ನಗದು ಹಣ, 2 ಮೊಬೈಲ್,03 ಓಸಿ ಚೀಟಿಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆಹಾಗೂ ಕಾನೂನು ರೀತ್ಯಾ ಪ್ರಕರಣ ದಾಖಲಿಸಲಾಗಿದೆ.
ಡಿಸಿಆರ್ಬಿ ಘಟಕದ ಪೊಲೀಸ್ ಉಪಾಧೀಕ್ಷಕ ಬಿ. ಎಸ್. ಬಸವರಾಜ್ ಮತ್ತು ಅಧಿಕಾರಿ ಸಿಬ್ಬಂದಿಗಳು ಮಟ್ಕಾ ಜೂಜಾಟ ಅಡ್ಡೆ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.