ಧನಶ್ರೀ ಯೋಜನೆಯಡಿ ಅರ್ಜಿ ಆಹ್ವಾನ
ದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಧನಶ್ರೀ ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ನಿಗಮದಿಂದ 30 ಸಾವಿರ ರೂ., ಪ್ರೋತ್ಸಾಹಧನವನ್ನು ನೀಡುವ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರ ಮಹಿಳೆಯ ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ದಾವಣಗೆರೆ ಜಿಲ್ಲೆಗೆ ಭೌತಿಕ 21 ಗುರಿ ನಿಗದಿಪಡಿಸಿದ್ದು, ಹೆಚ್.ಐ.ವಿ. ಸೋಂಕು ಇರುವ ಸಂಬಂಧ ಐ.ಸಿ.ಟಿ.ಸಿ ಅಥವಾ ಪಿ.ಪಿ.ಟಿ.ಸಿ.ಟಿ. ಕೇಂದ್ರಗಳಿಂದ ಪಡೆದ ವೈದ್ಯಕೀಯ ದೃಢೀಕರಣ ಪತ್ರ ಸಲ್ಲಿಸಬೇಕು.
ಪ್ರೋತ್ಸಾಹಧನಕ್ಕಾಗಿ ಉದ್ದೇಶಿತ ಆದಾಯೋತ್ಪನ್ನ ಚಟುವಟಿಕೆಯ ಯೋಜನಾ ವರದಿ ಸಲ್ಲಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಬ್ಯಾಂಕ್ ಖಾತೆಯೊಂದಿಗೆ ಅರ್ಜಿದಾರರ ಆಧಾರ್ ಸೀಡಿಂಗ್ ಆಗಿರಬೇಕು. ಖಾತೆ ಪುಸ್ತಕದ ನಕಲು ಪ್ರತಿ, ಬ್ಯಾಂಕಿನ ಹೆಸರು, ಐ.ಎಫ್.ಎಸ್.ಸಿ. ಕೋಡ್ ಹಾಗೂ ಆಧಾರ್ ಕಾರ್ಡ್ನ ದಾಖಲೆ ಸಲ್ಲಿಸಬೇಕು. ಅರ್ಜಿದಾರಳು ಯಾವುದೇ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳಲ್ಲಿ ಸುಸ್ತಿದಾರರಾಗಿರಬಾರದು.
ಖಾತೆ ಹೊಂದಿರುವ ಬ್ಯಾಂಕ್ನಲ್ಲಿ ಸಾಲ ಪಡೆದಿಲ್ಲ ಎಂಬ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು. ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ಕುಟುಂಬದಲ್ಲಿ ಹೆಚ್.ಐ.ವಿ. ಸೋಂಕಿತ ಒಬ್ಬ ಮಹಿಳೆಗೆ ಮಾತ್ರ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ನಿಗದಿತ ಅರ್ಜಿಯನ್ನು ಸಂಜೀವಿನಿ ನೆಟ್ವರ್ಕ್ ದಾವಣಗೆರೆ, 3ನೇ ಮುಖ್ಯ ರಸ್ತೆ, 2ನೇ ಕ್ರಾಸ್, ಎಂ.ಸಿ.ಸಿ. ಬಿ ಬ್ಲಾಕ್, ದಾವಣಗೆರೆ ಇವರಿಂದ ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಆ.24 ರಂದು ಸಂಜೆ 5.30 ರೊಳಗಾಗಿ ಸಂಸ್ಥೆಯ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕರ ಸರ್ಕಾರಿ ಬಾಲಮಂದಿರ ಕಟ್ಟಡದ ಹಿಂಭಾಗ, ಕುವೆಂಪುನಗರ, ಎಂ.ಸಿ.ಸಿ. ಬಿ. ಬ್ಲಾಕ್, ದಾವಣಗೆರೆ. ದೂರವಾಣಿ: 08192-296268 ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.