Dharmastala: ಡಾ. ಶಾಮನೂರು ಶಿವಶಂಕರಪ್ಪನವರ 95ನೇ ಹುಟ್ಟುಹಬ್ಬ, ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

ದಾವಣಗೆರೆ: (Dharmastala) ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪನವರ 95ನೇ ಹುಟ್ಟುಹಬ್ಬದ ಪ್ರಯುಕ್ತ ನಾಳೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ದಾವಣಗೆರೆಯ ವೇದಮೂರ್ತಿ ಶಾಮನೂರು ಅಭಿಮಾನಿಗಳ ಬಳಗದ ವತಿಯಿಂದ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.
ಶಾಮನೂರು ಶಿವಶಂಕರಪ್ಪನವರು 95ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ.ವೀರೇಂದ್ರ ಹೆಗ್ಗಡೆ ರವರು ವಿಶೇಷ ಶುಭಾಶಯಗಳನ್ನು ಕೋರಿದರು.
ಡಾ ಶಾಮನೂರು ಶಿವಶಂಕರಪ್ಪನವರ 95ನೇ ಹುಟ್ಟುಹಬ್ಬದ ಪ್ರಯುಕ್ತ ಅವರು ಶತಾಯುಷಿಗಳಾಗಲಿ ಹಾಗೂ ಹೆಚ್ಚಿನ ಆರೋಗ್ಯ ದೊರಕಲಿ ಎಂದು ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಮಹಾಸಭಾ ಜಿಲ್ಲಾ ಉಪಾಧ್ಯಕ್ಷರಾದ ಶಾಮನೂರು ವೇದಮೂರ್ತಿ ಅಣ್ಣನವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವೀರಶೈವ ಮಹಾಸಭಾ ದಾವಣಗೆರೆ ಜಿಲ್ಲಾ ಯುವ ಘಟಕ ಅಧ್ಯಕ್ಷರಾದ ಶಿವರಾಜ್ ಜೆ ತಾಲ್ಲೂಕು ಅಧ್ಯಕ್ಷರಾದ ಶಂಭು ಉರೇಕೊಂಡಿ ಯುವ ಘಟಕದ ಮಂಜುನಾಥ್ ದೊಡ್ಡಮನಿ, ಆದರ್ಶ್ ಎಸ್ ಎಂ, ಗುರು ಬಂಟಿ ಮತ್ತಿತರರು ಹಾಜರಿದ್ದರು