ಕೊಡಗನೂರು ಕೆರೆ ಏರಿ ಭದ್ರತೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಕೊಡಗನೂರು ಕೆರೆ ಏರಿ ಭದ್ರತೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಕೊಡಗನೂರು ಕೆರೆ ಏರಿಯು ಕಳೆದ ವರ್ಷದ ಭಾರಿ ಮಳೆಗೆ ಕುಸಿದು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ಏರಿಗೆ ಲಕ್ಷ ಮರಳಿನ ಚೀಲಗಳನ್ನು ಹಾಕುವ ಮೂಲಕ ಏರಿ ಭದ್ರತೆ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಈ ವರ್ಷ ಮುಂಗಾರು ಆರಂಭವಾಗುತ್ತಿದ್ದು ಏರಿಯ ಭದ್ರತೆಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು ಇಂಜಿನಿಯರ್‍ಗಳ ತಂಡದೊಂದಿಗೆ ಮೇ 24 ರಂದು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮತ್ತು ಕೊಡಗನೂರು ಕೆರೆ ಎರಡು ಕಡೆಯ ಕೋಡಿಯನ್ನು ಪರಿಶೀಲನೆ ನಡೆಸಿ ಈ ಹಿಂದೆ ಬಸಿ ಹೋಗುತ್ತಿದ್ದು ದುರಸ್ಥಿ ನಂತರ ಬಸಿ ನಿಂತಿರುವುದರನ್ನು ಪರಿಶೀಲಿಸಿದರು.

ಕೊಡಗನೂರು ಕೆರೆ ಏರಿ ಭದ್ರತೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಕೆರೆ ಏರಿಯನ್ನು ಮರಳು ಮತ್ತು ಮಣ್ಣುನ್ನು ಹಾಕುವ ಮೂಲಕ ಭದ್ರತೆ ಮಾಡಿದ್ದು ಏರಿಯನ್ನು ಹೊಸದಾಗಿ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೇ ಮಾರ್ಗದ ಮೂಲಕ ಚಿಕ್ಕಜಾಜೂರು, ಹೊಳಲ್ಕೆರೆ, ಹೊಸದುರ್ಗಕ್ಕೆ ಹೋಗುವ ಹೋಗಬೇಕಾಗಿದ್ದು ಲೋಕೋಪಯೋಗಿ ಇಲಾಖೆಯಿಂದ ರಸ್ತೆಯನ್ನು ನಿರ್ಮಿಸಲು ಸಹ ಸ್ಥಳದಲ್ಲಿದ್ದ ಇಂಜಿನಿಯರ್‍ಗೆ ಸೂಚನೆ ನೀಡಿದರು.

ಈ ವೇಳೆ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರವೀಣ್, ಸಹಾಯಕ ಇಂಜಿನಿಯರ್ ರುದ್ರಮುನಿ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಸ್ವಾಮಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!