ಉದ್ಯೋಗ ಅರಸಿ ಟೆಂಟ್‍ನಲ್ಲಿ ನೆಲೆಸಿದ ಅಲೆಮಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಉದ್ಯೋಗ ಅರಸಿ ಟೆಂಟ್‍ನಲ್ಲಿ ನೆಲೆಸಿದ ಅಲೆಮಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ :ಕಲಬುರಗಿ, ಸೊಲ್ಲಾಪುರ, ಚನ್ನಗಿರಿ ತಾಲ್ಲೂಕಿನ ಅಲ್ತಾಪನಹಳ್ಳಿಯಿಂದ ವಿವಿಧ ಉದ್ಯೋಗಕ್ಕಾಗಿ ದಾವಣಗೆರೆಗೆ ಬಂದು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಬನಶಂಕರಿ ಬಡಾವಣೆಯ ಬಳಿಯ ಸೇವಾ ರಸ್ತೆ ಪಕ್ಕದಲ್ಲಿ ವಿವಿಧ ಟೆಂಟ್‍ಗಳಲ್ಲಿ ವಾಸಿಸುತ್ತಿದ್ದ ಕುಟುಂಬಗಳನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮೇ 25 ರಂದು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದರು.

ಉದ್ಯೋಗ ಅರಸಿ ಟೆಂಟ್‍ನಲ್ಲಿ ನೆಲೆಸಿದ ಅಲೆಮಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಕಳೆದೆರಡು ದಿನಗಳಿಂದ ವಿವಿಧೆಡೆ ಗಾಳಿ, ಸಿಡಿಲು, ಮಳೆಯಾಗುತ್ತಿದ್ದು ಬಯಲು ಪ್ರದೇಶದಲ್ಲಿ ಈ ಜನರು ವಾಸಿಸುತ್ತಿದ್ದು ಇವರ ಕುಂದುಕೊರತೆಗಳನ್ನು ಆಲಿಸಿದರು. ಈಗಾಗಲೇ ರಾಜ್ಯದಲ್ಲಿ ಅನೇಕ ಕಡೆ ಮಳೆ, ಸಿಡಿಲಿಗೆ ಜನ, ಜಾನುವಾರುಗಳು ಸಾವನ್ನಪ್ಪಿದ್ದು ಈ ಹಿನ್ನಲೆಯಲ್ಲಿ ಅವರ ಕಷ್ಟಗಳನ್ನು ಆಲಿಸಿದರು.

ಇಲ್ಲಿ ಒಟ್ಟು 21 ಕುಟುಂಬಗಳು ವಾಸಿಸುತ್ತಿದ್ದು ಇದರಲ್ಲಿ ಕಲಬುರಿಗಿ ಜಿಲ್ಲೆಯ ಚಿಂಚೊಳ್ಳಿಯ ಕೆಲವು ಕುಟುಂಬಗಳು ಇವರು ಗ್ಯಾಸ್ ಸ್ಟವ್ ರಿಪೇರಿ ಕೆಲಸ ಮಾಡಲು ಬಂದು ತಾತ್ಕಾಲಿಕ ಟೆಂಟ್‍ನಲ್ಲಿ ನೆಲೆಸಿರುವರು. ಸೊಲ್ಲಾಪುರದಿಂದ ಕೆಲವು ಕುಟುಂಬಗಳು ಬಂದಿದ್ದು ಇವರು ಖಾಲಿ ಬಾಟಲಿಗಳನ್ನು ಸಂಗ್ರಹಿಸಿ ಸೊಲ್ಲಾಪುರಕ್ಕೆ ಕಳುಹಿಸುವ ಕೆಲಸ ಮಾಡುತ್ತಿದ್ದಾರೆ. ಮತ್ತು ಚನ್ನಗಿರಿ ತಾಲ್ಲೂಕಿನ ಅಲ್ತಾಪನಹಳ್ಳಿಯ ಹಕ್ಕಿಪಿಕ್ಕಿ ಜನರು ಇಲ್ಲಿ ತಾತ್ಕಾಲಿಕ ಟೆಂಟ್ ನಿರ್ಮಿಸಿಕೊಂಡು ವಿವಿಧ ಉದ್ಯೋಗ ಮಾಡಿ ಇಲ್ಲಿ ವಾಸಿಸುತ್ತಿದ್ದಾರೆ.

ಉದ್ಯೋಗ ಅರಸಿ ಟೆಂಟ್‍ನಲ್ಲಿ ನೆಲೆಸಿದ ಅಲೆಮಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿಪೌಷ್ಟಿಕ ಆಹಾರ ವಿತರಣೆಗೆ ಮತ್ತು ಸ್ವ ಉದ್ಯೋಗಕ್ಕೆ ಕ್ರಮ :  ಈ ಕುಟುಂಬಗಳಲ್ಲಿ ಇರುವ ಚಿಕ್ಕ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪೌಷ್ಟಿಕ ಆಹಾರ ವಿತರಣೆಯನ್ನು ಮಾಡಲು ತಿಳಿಸಿ ಹಕ್ಕಿಪಿಕ್ಕಿ ಜನರು ಜಿಲ್ಲೆಯವರಾಗಿದ್ದು ಇವರಿಗೆ ಅಭಿವೃದ್ದಿ ನಿಗಮದ ಮೂಲಕ ಸ್ವ ಉದ್ಯೋಗಕ್ಕೆ ಸಾಲ, ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಉದ್ಯೋಗ ಅರಸಿ ಟೆಂಟ್‍ನಲ್ಲಿ ನೆಲೆಸಿದ ಅಲೆಮಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿಸಹಾಯಕ್ಕೆ ಜಿಲ್ಲಾ ಆಡಳಿತ ಸಿದ್ದ :ಇಲ್ಲಿ ವಾಸಿಸುತ್ತಿರುವ ಎಲ್ಲರೂ ಆದಷ್ಟು ಬೇಗ ನಿಮ್ಮ ಗ್ರಾಮಗಳಿಗೆ ತಲುಪಿ ಅಲ್ಲಿಯೇ ವಿವಿಧ ಉದ್ಯೋಗ ಮಾಡಲು ತಿಳಿಸಿ ಸ್ವ ಉದ್ಯೋಗ ಕೈಗೊಳ್ಳಲು ಸರ್ಕಾರದ ವಿವಿಧ ಸೌಲಭ್ಯಗಳನ್ನು ಬಳಕೆ ಮಾಡಲು ತಿಳಿಸಿ ಏನಾದರೂ ತೊಂದರೆಯಾದಲ್ಲಿ ಜಿಲ್ಲಾ ಆಡಳಿತದ ಗಮನಕ್ಕೆ ತನ್ನಿ ತಮಗೆ ಜಿಲ್ಲಾ ಆಡಳಿತ ಸಹಾಯಕ್ಕೆ ಸದಾ ಸಿದ್ದವಿದೆ ಎಂದು ಅವರಲ್ಲಿ ಭರವಸೆ ಮೂಡಿಸಿದರು.

ಈ ವೇಳೆ ಡಾ; ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!