ವೈದ್ಯರ ಮೇಲೆ ನಿರಂತರ ಹಲ್ಲೆ, ಸೂಕ್ತ ರಕ್ಷಣೆ ನೀಡುವಂತೆ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ದಾವಣಗೆರೆ‍: ವೈದ್ಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಖಂಡಿಸಿ ಐಎಂಎ ವತಿಯಿಂದ ನಗರದ ಬಾಪೂಜಿ ಆಸ್ಪತ್ರೆಯ ಮುಂಭಾಗ ವೈದ್ಯರು ಪ್ರತಿಭಟನೆ ನಡೆಸಿದರು. ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ವೈದ್ಯರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದ್ದು, ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ, ಕರೋನಾದಿಂದ ಸಾವನ್ನಪ್ಪಿದ ವೈದ್ಯರನ್ನು ಕೊರೋನಾ ಹುತಾತ್ಮರು ಎಂದು ಘೋಷಿಸಲು ಆಗ್ರಹಿಸಿ ವೈದ್ಯರುಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ವೈದ್ಯರು ಕೊವೀಡ್ ವಿರುದ್ದ ಪ್ರಾಣದ ಹಂಗು ತೊರೆದು, ಕುಟುಂಬದಿಂದ ದೂರ ಉಳಿದು ರೋಗಿಗಳ ಪ್ರಾಣ ಉಳಿಸುವಲ್ಲಿ ಸೇವೆ ಸಲ್ಲಿಸುತ್ತಿದ್ದು, ನಮ್ಮ ಕೈಮೀರಿ ರೋಗಿಗಳ ಪ್ರಾಣಕ್ಕೆ ಅಪಾಯ ಉಂಟಾದರೆ ಅದಕ್ಕೆ ರೋಗಿಗಳ ಸಂಬಂಧಿಕರು ವೈದ್ಯರನ್ನ ಹೊಣೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವ ಜತೆಗೆ ನಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಆಕ್ರೋಶ ಹೊರಹಾಕಿದರು.

ರೋಗಿಗಳ ಸಂಬಂಧಿಕರು ವೈದ್ಯರ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಾ ಬಂಧಿರುವುದು ಖಂಡನೀಯವಾಗಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವೈದ್ಯರಿಗೆ ರಕ್ಷಣೆ ಕೊಡಬೇಕು ಎಂದು ವೈದ್ಯರು ಒತ್ತಾಯಿಸಿದರು. ನಾವುಗಳು ನಮ್ಮ ಸೇವೆಯನ್ನು ನಿಷ್ಠೆಯಿಂದ, ಪ್ರಾಮಾಣಿಕವಾಗಿ ಮಾಡಿ ರೋಗಿಗಳ ಪ್ರಾಣ ಕಾಪಾಡಲು ಮುಂದಾಗುತ್ತೇವೆ. ಆದರೂ ಸಹ ವೈದ್ಯರ ಮೇಲೆ ನಿರಂತರವಾಗಿ ಹಲ್ಲೆ ನಡೆಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!