Dr Arun K IPS Transfer: ಖಡಕ್ ಐಪಿಎಸ್ ಅಧಿಕಾರಿ ಡಾ ಅರುಣ್ ಕೆ. ಕಲಬುರ್ಗಿ ಪಿಟಿಎಸ್ ಎಸ್ ಪಿ ಯಾಗಿ ವರ್ಗಾವಣೆ

ಬೆಂಗಳೂರು: ( Dr Arun K IPS Transfer ) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಇಂದು ದಾವಣಗೆರೆ ಜಿಲ್ಲೆಯ ಪೋಲೀಸ್ ವರಿಷ್ಟಾಧಿಕಾರಿ ಡಾ; ಅರುಣ್ ಕೆ. ಐಪಿಎಸ್ ಇವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ದಾವಣಗೆರೆ ಜಿಲ್ಲೆಗೆ ಯಾರನ್ನು ನೇಮಕ ಮಾಡದೆ ವರ್ಗಾವಣೆ ಮಾಡಿದೆ.
ಕಲಬುರ್ಗಿ ಜಿಲ್ಲೆಯ ಪೋಲೀಸ್ ತರಬೇತಿ ಕೇಂದ್ರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿದೆ. ಈ ಹಿಂದೆ ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ ಅರುಣ್ ಚುನಾವಣಾ ಸಮಯದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಎಸ್ ಪಿ ಆಗಿ ನೇಮಕಗೊಂಡಿದ್ದರು. ಡಾ. ಅರುಣ್ ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಎಪ್ರಿಲ್ ತಿಂಗಳಿನಲ್ಲಿ ದಾವಣಗೆರೆ ಎಸ್ ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು, ಕೇವಲ 5 ತಿಂಗಳಿಗೆ ಎಸ್ ಪಿ ಅರುಣ್ ಅವರನ್ನ ಸರ್ಕಾರ ವರ್ಗಾವಣೆ ಮಾಡಿದೆ.
ಶಾಸಕರ ಆಸೆ ಇಡೆರಿಸಿದ ಸರ್ಕಾರ: ಇತ್ತೀಚೆಗೆ ಹೊನ್ನಾಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಶಾಂತನಗೌಡ ಮರಳು ಎತ್ತಲು ಎಸ್ ಪಿ ಬಿಡುತ್ತಿಲ್ಲ ಅವರನ್ನು ಟ್ರಾನ್ಸಫರ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಓತ್ತಾಯಿಸಿದ್ದರು, ತದನಂತರ ಎಸ್ ಎಸ್ ಮಲ್ಲಿಕಾರ್ಜಉನ್ ತಮ್ಮ ಭಾಷಣದಲ್ಲಿ ಶಾಂತನಗೌಡ್ರಿ ಕೇಳೋದು ಒಂದೇ ಎಸ್ ಪಿ ಟ್ರಾನ್ಸಫರ್ ಮಾಡ್ರಿ ಅಂತಾ, ಅವರೊಬ್ಬರೆ ಅಲ್ಲಾ ಎಲ್ಲಾ ಶಾಸಕರು ಕೇಳಿದ್ದಾರೆ ಎಂದಿದ್ದರು, ಹಾಗೇನೆ ಎಸ್ ಪಿ ಒಳ್ಳೆಯವರು ಇದ್ದಾರೆ ಬಿಗಿನೂ ಇದ್ದಾರೆ, ಓಳ್ಳೆ ಅಧಿಕಾರಿಗಳು ಇರಬೇಕು ಎಂದಿದ್ದರು, ಆದ್ರೆ ಇಂದು ಸರ್ಕಾರದಿಂದ ಎಸ್ ಪಿ ಡಾ, ಅರುಣ್ ಅವರನ್ನು ವರ್ಗಾವಣೆಗೊಳಿಸಿರುವುದರಿಂದ ದಾವಣಗೆರೆ ಜಿಲ್ಲೆಯ ಎಲ್ಲಾ ಶಾಸಕರುಗಳಿಗೂ ಹಾಲು ಕುಡಿದಷ್ಟು ಸಂತೋಷವಾಗಿದೆ ಎಂಬುದು ಜನರ ಅಭಿಪ್ರಾಯವಾಗಿದೆ.