ಡಾ.ಎಸ್ ಎಂ ಎಲಿಯವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಅಭಿಯಾನ: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರ ಒತ್ತಾಯ

IMG_20210714_160904

ದಾವಣಗೆರೆ. ಜು.೧೪; ಭಾರತದ ಅತ್ಯುನ್ನತ ನಾಗರೀಕ ಪುರಸ್ಕಾರಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗೆ ಸೂಕ್ತ ಹಾಗೂ ಅರ್ಹ ವ್ಯಕ್ತಿಗಳನ್ನು ಸೆ.೧೫ ರೊಳಗಾಗಿ ನಾಮನಿರ್ದೇಶನ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದಾವಣಗೆರೆಯ ಹಿರಿಯ ವೈದ್ಯರು,ಬಡವರ ಬಂಧು ಎಂದೇ ಹೆಸರು ವಾಸಿಯಾಗಿರುವ ಡಾ.ಎಸ್.ಎಂ ಎಲಿ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ದಾವಣಗೆರೆ ನಗರದ ಜನತೆ ವಾಟ್ಸ್ಅಪ್ ಅಭಿಯಾನ ಆರಂಭಿಸಿದ್ದಾರೆ.ಡಾ.ಎಸ್ ಎಂ ಎಲಿಯವರಿಗೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲು ವೈದ್ಯಕೀಯ ವೃತ್ತಿಪರರು ಸಹ ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನಕ್ಕೆ ಮುಂದಾಗಿದ್ದಾರೆ.

ಇಳಿವಯಸ್ಸಿನಲ್ಲೂ ಕೂಡ ಡಾ.ಎಲಿಯವರು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ.ಇಂದಿಗೂ ಕೂಡ ಕೇವಲ ೧೦ ರೂ ಮಾತ್ರ ಚಿಕಿತ್ಸಾ ವೆಚ್ಚ ಪಡೆಯುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಪ್ರತಿನಿತ್ಯ ನೂರಾರು ರೋಗಿಗಳಿಗೂ ೯೦ ರ ಈ ಇಳಿವಯಸ್ಸಿನಲ್ಲೂ ಚಿಕಿತ್ಸೆ ನೀಡುತ್ತಿದ್ದಾರೆ.

ಮದ್ಯ ಕರ್ನಾಟಕದ ದಾವಣಗೆರೆಯ ಸುತ್ತಮುತ್ತಲಿನ ಜಿಲ್ಲೆಯ ನೂರಾರು ಜನರು ಇವರ ಬಳಿ ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ ಹಲವಾರು ಜನರು ಡಾ.ಎಲಿಯವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!