ಬಿಜೆಪಿ ರಾಜ್ಯ ವೈದ್ಯಕೀಯ ಪ್ರಕೋಷ್ಟ ಸದಸ್ಯತ್ವದ ಸ್ಥಾನಕ್ಕೆ ದಾವಣಗೆರೆಯ ಡಾ.ಟಿ.ಜಿ.ರವಿಕುಮಾರ್ ಆಯ್ಕೆ

ದಾವಣಗೆರೆ: ಡಾ.ಜಯಕರ ಶೆಟ್ಟಿ ಅವರಿಂದ ತೆರವಾಗಿದ್ದ ಬಿಜೆಪಿ ರಾಜ್ಯ ವೈದ್ಯಕೀಯ ಪ್ರಕೋಷ್ಟ ಸದಸ್ಯತ್ವದ ಸ್ಥಾನಕ್ಕೆ ದಾವಣಗೆರೆ ನಗರದ ಆರೈಕೆ ಆಸ್ಪತ್ರೆಯ ಮುಖ್ಯಸ್ಥ ಹಾಗು ಜಗಳೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಟಿ. ಗುರುಸಿದ್ದನಗೌಡರ ಪುತ್ರ ಡಾ.ಟಿ.ಜಿ.ರವಿಕುಮಾರ್ ರವರನ್ನು ಆಯ್ಕೆ ಮಾಡಿ ಭಾಜಪ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಈ ಸಂಧರ್ಭದಲ್ಲಿ ಮಾತನಾಡಿದ ಡಾ. ರವಿಕುಮಾರ್ ಅವರು ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಈ ಗುರುತರ ಜವಾಬ್ದಾರಿಯನ್ನು ಕೊಟ್ಟಿದ್ದಕ್ಕೆ ಕಾರಣರಾದ ಮಾನ್ಯ ರಾಜ್ಯಾಧ್ಯಕ್ಷರಾದ ಶ್ರೀ. ನಳಿನ್ ಕುಮಾರ್ ಕಟೀಲ್, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ. ಬಸವರಾಜ್ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ,
ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಸುರಾನ, ಪ್ರಕೋಷ್ಟಗಳ ಸಂಚಾಲಕರಾದ ಶ್ರೀ ಭಾನುಪ್ರಕಾಶ್, ಸಹ ಸಂಚಾಲಕರಾದ ಶ್ರೀ. ಶಿವಯೋಗ ಸ್ವಾಮಿ, ವೈದ್ಯ ಪ್ರಕೋಷ್ಟದ ರಾಜ್ಯ ಸಂಚಾಲಕರದ ಡಾ. ಮಹೇಶ್ ನಲವಾಡ್, ಸಹಕರಿಸಿದ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ.