ಕುಡಿಯುವ ನೀರಿಗೆ ಬರ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ವೈಪಲ್ಯ.-ಪ್ರಸನ್ನ ಕುಮಾರ್, ವಿರೋಧ ಪಕ್ಷದ ನಾಯಕರು, ಮಹಾನಗರ ಪಾಲಿಕೆ ದಾವಣಗೆರೆ

ದಾವಣಗೆರೆ: ಕಳೆದ ಎರಡು ದಿನದಿಂದ ನಗರದಲ್ಲಿ ೨೫ ಕ್ಕೂ ಹೆಚ್ಚು ವಾರ್ಡಗಳಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗಿದೆ, ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ಬೇಜವಾಬ್ದಾರಿಯಿಂದಾಗಿ ಇಂದು ನಗರದ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗಿದೆ.

ಬೇಸಿಗೆಯಲ್ಲಿ ನೀರು ಪೂರೈಸಲು ೨ ತಿಂಗಳುಗಳ ಮುನ್ನವೆ ನಗರದ ಕುಡಿಯುವ ನೀರಿನ ಅವಶ್ಯಕತೆ ಅನುಗುಣವಾಗಿ ನೀರನ್ನು ಸಂಗ್ರಹಿಸಬೇಕಾಗಿದ್ದ ಪಾಲಿಕೆ ಕಣ್ಣು ಮುಚ್ಚಿ ಕುಳಿತ ಪರಿಣಾಮವನ್ನ ನಗರದ ಜನತೆ ಅನುಭವಿಸಬೇಕಾಗಿದೆ.

ನೀರಿನ ಸಂಗ್ರಹಗಾರಗಳು ಬರಿದಾಗಿವೆ ಪ್ರತಿ ದಿನ ಕನಿಷ್ಠ ೬೦ಒಐಆ ನೀರಿನ ಅವಶ್ಯಕತೆ ಇದೆ ರಾಜನಹಳ್ಳಿ ಕೆರೆ ಬರಿದಾಗಿದೆ ಕುಂಡವಾಡ ಕೆರೆಯಲ್ಲೂ ಮತ್ತು ಟಿವಿ ಸ್ಟೇಷನ್ ಕೆರೆಯೂ ಕನಿಷ್ಠ ನೀರಿನ ಮಟ್ಟ ತಲುಪಿ ಬರಿದಾಗಿದೆ. ಜನವರಿ ತಿಂಗಳಲ್ಲೇ ಜಿಲ್ಲಾಡಳಿತಕ್ಕೆ ಭದ್ರಾ ನೀರನ್ನು ಹರಿಸಿ ಬೇಸಿಗೆಗೆ ಅಗತ್ಯವಿರುವ ನೀರನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ೨ಬಾರಿ ಮನವಿ ಸಲ್ಲಿಸಲಾಯಿತು ಮತ್ತು ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ದುರ್ಗಂಬಿಕಾ ಜಾತ್ರೆ ಮತ್ತು ಬೇಸಿಗೆಗೆ ಕುಡಿಯುವ ನೀರಿನ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹಿಸಿದರು ಸಹ. ಜನರ ಮೂಲಭೂತ ಸಮಸ್ಯೆಗಳಿಗೆ ಕಿವಿ ಕೊಡಬೇಕಿದ್ದ ಕಾಂಗ್ರೆಸ್ ನ ಆಡಳಿತ ಅದಿಕಾರದ ಮಜವಾದಿತನವನ್ನು ಪ್ರದರ್ಶನ ಮಾಡುತ್ತಾ ನಗರದ ಜನರಿಗೆ ಬರದ ಗ್ಯಾರಂಟೀ ನೀಡಿದೆ.

ಕನಿಷ್ಠ ಕುಡಿಯುವ ನೀರನ್ನು ಕೊಡದ ಕಾಂಗ್ರೆಸ್ ಜನರ ಮನೆಗಳಲ್ಲಿ ನೀರಿನ ಕೊಡಗಳು  ಬರಿದಾಗಲಿವೆ ಎಂಬುದನ್ನು ಖಚಿತ ಪಡಿಸಿದೆ.
ಈ ಕೂಡಲೆ ಜಿಲ್ಲಾಡಳಿತ ಮತ್ತು ಮಾನ್ಯ ಸಚಿವರು ಸರ್ಕಾರದ ಮೇಲೆ ಒತ್ತಡ ಹೇರಿ ಮುಂದಿನ ೪೫ ದಿನಗಳಿಗೆ ಅವಶ್ಯಕವಿರುವ ನೀರನ್ನು ಡ್ಯಾಮ್ ನಿಂದ ನದಿಗೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಇನ್ನೆರಡು ದಿನಗಳಲ್ಲಿ ನೀರಿನ ವ್ಯತ್ಯಯ ಉಂಟಾದ ವಾರ್ಡ್ಗಳಿಗೆ ಕುಡಿಯುವ ನೀರನ್ನು ಪೂರೈಸಲು ಅನ್ಯ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಬೇಕು , ಒಂದು  ವೇಳೆ ಪಾಲಿಕೆ ಮತ್ತು ಜಿಲ್ಲಾಡಳಿತ ಕುಡಿಯುವ ನೀರು ಪೂರೈಸಲು ವಿಫಲವಾದಲ್ಲಿ ಹೋರಾಟ ಮಾಡಲಾಗುವುದು.

ಇಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಪ್ರಸನ್ನ ಕುಮಾರ್, ಇವರ ನೇತೃತ್ವದಲ್ಲಿ ಮಾಜಿ ಮೇಯರ್ ಎಸ್ಟಿ ವೀರೇಶ್, ಉಪ ಮಹಾ ಪೌರರಾದ ಯಶೋಧ ಹೆಗ್ಗಪ್ಪ, ಪಾಲಿಕೆ ಸದಸ್ಯರಾದ ಅರ್.ಶಿವಾನಂದ್, ಎಲ್.ಡಿ ಗೋಣ್ಯಪ್ಪ, ಕೆ.ಎಂ ವೀರೇಶ್, ಶಾಂತ್ ಕುಮಾರ್ ಸೋಗಿ, ಶಿವಪ್ರಕಾಶ್, ತಂಡ ಮತ್ತು ಬಿ.ಜೆಪಿ ಇತರೆ ಬಿಜೆಪಿ ಪಾಲಿಕೆ ಸದಸ್ಯರ ತಂಡ ಹರಿಹರದ ರಾಜನಹಳ್ಳಿ ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿದರು.

Leave a Reply

Your email address will not be published. Required fields are marked *

error: Content is protected !!