ನೆಲ,ಜಲ,ಭಾಷೆಯ ವಿಷಯದಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ರಾಜ್ಯದ ಪರ ನಿಲ್ಲುತ್ತೆವೆ – ಸಂಸದ ಜಿಎಂ ಸಿದ್ದೇಶ್ವರ

WhatsApp Image 2021-11-01 at 5.42.12 PM

ದಾವಣಗೆರೆ: ಕರ್ನಾಟಕದ ನೆಲ, ಜಲ, ಭಾಷೆಯ ವಿಷಯದಲ್ಲಿ ನಾವೆಲ್ಲಾ ಸಂಸದರು, ಶಾಸಕರು ಅದರ ಬಗ್ಗೆ ಹೆಚ್ಚು ಒತ್ತು ನೀಡಿ ಒಗ್ಗಟ್ಟಾಗಿ ರಾಜ್ಯದ ಪರವಾಗಿ ನಿಂತು ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಭರವಸೆ ನೀಡಿದರು.

ರಾಜ್ಯೋತ್ಸವ ಆಚರಣೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜಕುಮಾರ್ ಅವರು ಅಕಾಲಿಕೆ ನಿಧನ ಹೊಂದಿದ್ದು, ಅವರ ಕುಟುಂಬ ವರ್ಗದವರು ಮತ್ತು ರಾಜ್ಯದ ಜನತೆ ಶೋಕಸಾಗರದಲ್ಲಿ ಮುಳುಗಿದ್ದಾರೆ. ಪುನೀತ್ ಕುಟುಂಬಕ್ಕೆ ಹಾಗು ಜನತೆಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು.

ಪುನೀತ್ ಅವರ ಅಂತಿಮ ದರ್ಶನಕ್ಕೆ ಮೂರು ದಿನಗಳ ಕಾಲ ಅವಕಾಶ ನೀಡಲಾಗಿದ್ದು, ಈ ಸನ್ನಿವೇಶವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿಶೇಷ ವ್ಯವಸ್ಥೆ ಮಾಡಿ, ಶವಸಂಸ್ಕಾರದ ವರೆಗೆ ಎಲ್ಲಾ ಕಾರ್ಯಗಳನ್ನು ಸುಸೂತ್ರವಾಗಿ ನೆರವೇರಿಸಿರುವುದು ಕರ್ನಾಟಕದಲ್ಲಿ ಇದು ಮೊದಲ ಬಾರಿ ಅನ್ನಿಸುತ್ತದೆ. ಸಾಂಗವಾಗಿ ನೆರವೇರಿಸಲು ಅಗತ್ಯ ಕ್ರಮ ವಹಿಸಿದ ಬೊಮ್ಮಾಯಿ ಅವರಿಗೆ ಹಾಗೂ ಪೊಲೀಸ್ ತಂಡಕ್ಕೆ ಅಭಿನಂದಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!