Education; ಚಿಂದಿ ಆಯುವವರ ಮಕ್ಕಳಿಗೆ 6ನೇ ತರಗತಿಗೆ ದಾಖಲಾತಿ: ಪಿ.ಮಣಿವಣ್ಣನ್

ಬೆಂಗಳೂರು, ಅ.13: ಚಿಂದಿ ಆಯುವ ಮಕ್ಕಳಿಗೆ ಶಿಕ್ಷಣ (Education)ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕರ್ನಾಟಕ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಸಫಾಯಿ ಕರ್ಮಚಾರಿ ಮಕ್ಕಳಿಗೆ ನಿಗದಿ ಮಾಡಿರುವ ಶೇ.5 ರಷ್ಟು ಮೀಸಲಾತಿಯಡಿ ಚಿಂದಿ ಆಯುವವರ ಮಕ್ಕಳಿಗೆ 6ನೇ ತರಗತಿಗೆ ಪ್ರವೇಶಾತಿ ಕಲ್ಪಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಚಿಂದಿ ಆಯುವ ಮಕ್ಕಳಿಗೆ ಸ್ಥಳಿಯ ಪ್ರಾಧಿಕಾರಗಳಾದ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಪಂಚಾಯತ್ ಸಂಸ್ಥೆಗಳಿಂದ ಪ್ರಮಾಣ ಪತ್ರ ವಿತರಿಸುವ ಷರತ್ತು ವಿಧಿಸಿ ರಾಜ್ಯಪಾಲರ ಆದೇಶದ ಅನುಸಾರ ಅನುಮೋದನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

job; ಇಂಟೆಲಿಜೆನ್ಸ್‌ ಬ್ಯೂರೋದಲ್ಲಿ 677 ಹುದ್ದೆಗಳು : SSLC ಪಾಸ್ ಆದವರಿಗೆ ಭರ್ಜರಿ ಸಿಹಿಸುದ್ದಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಡಿಲ್ಲಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಕಲ್ಪಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಅದರನ್ವಯ ವಿಶೇಷ ವರ್ಗಗಳಿಗೆ ಸ್ಥಾನ ಹಂಚಿಕೆಯಲ್ಲಿ ಸಾಯಿ ಕರ್ಮಚಾರಿಗಳ ಮಕ್ಕಳಿಗೆ ಶೇ.5ರಂತೆ ಸ್ಥಾನ ಹಂಚಿಕೆ ಮಾಡಲಾಗಿದೆ.

ಚಿಂದಿ ಆಯುವವರಿಗೆ ಪ್ರಮಾಣಪತ್ರ ನೀಡಲು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಪಂಚಾಯತ್ ಸಂಸ್ಥೆಗಳನ್ನು ಸಕ್ಷಮ ಪ್ರಾಧಿಕಾರಗಳೆಂದು ನಿಗದಿಪಡಿಸಿ, ಸಫಾಯಿ ಕರ್ಮಚಾರಿಗಳ ಮಕ್ಕಳ ಮೀಸಲಾತಿ ಅಡಿಯಲ್ಲಿ ಚಿಂದಿ ಆಯುವವರ ಮಕ್ಕಳಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಾತಿ ನೀಡುವ ಕುರಿತು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!