ವಿದ್ಯುತ್ ಸ್ಪರ್ಷ: ತಾಯಿ ಇಬ್ಬರು ಮಕ್ಕಳ ಸಾವು

ವಿದ್ಯುತ್ ಸ್ಪರ್ಷ: ತಾಯಿ ಇಬ್ಬರು ಮಕ್ಕಳ ಸಾವು

ಚಿಂಚೋಳಿ: ಮಳೆಯಿಂದ ದನದ ಮೇವು ರಕ್ಷಿಸಲು ಧಾವಿಸಿದ್ದಾಗ ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧನಗರಗಲ್ಲಿಯಲ್ಲಿ ತಡರಾತ್ರಿ ಸಂಭವಿಸಿದೆ.
ಮೃತರು 44 ವರ್ಷದ ತಾಯಿ ಝರಣಮ್ಮ ಅಂಬಣ್ಣ ಬಸಗೊಂಡ ಮತ್ತು ಇಬ್ಬರು ಮಕ್ಕಳಾದ 20 ವರ್ಷದ ಮಹೇಶ ಅಂಬಣ್ಣ ಬಸಗೊಂಡ 18 ವರ್ಷದ ಸುರೇಶ ಅಂಬಣ್ಣ ಬಸಗೊಂಡ ಮೃತ ದುರ್ದೈವಿಗಳು. ಘಟನೆಯಲ್ಲಿ ಮೃತ ಝರಣಮ್ಮ ಪತಿ ಅಂಬಣ್ಣಗೆ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.
ಚಿಂಚೋಳಿಯಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದ್ದು ಗಾಳಿಗೆ ಮನೆಯ ಮುಂದೆ ವಿದ್ಯುತ್ ತಂತಿ ತುಂಡಾಗಿ ನೀರಿನಲ್ಲಿ ಬಿದ್ದಿತ್ತು. ದನದ ಮೇವು ಮಳೆಗೆ ನೆನೆಯದಿರಲೆಂದು ಅದನ್ನು ಮುಚ್ಚಲು ಕಳೆದ ತಡರಾತ್ರಿ ಹೊರಬಂದಿದ್ದಾಗ ಕರೆಂಟ್ ಶಾಕ್ ಹೊಡೆದಿದೆ.
ಹೊರಗೆ ಹೋದವರು ಇನ್ನು ಬರಲಿಲ್ಲ ಎಂದು ನೋಡಲು ಬಂದಿದ್ದಾಗ ಒಬ್ಬಬ್ಬರೇ ಕರೆಂಟ್ ಶಾಕ್ ಗೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!