Ex CM Siddaramaiah: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ : ಪೂರ್ವಸಿದ್ಧತೆ ವೀಕ್ಷಿಸಿದ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

IMG-20210928-WA0040

 

ದಾವಣಗೆರೆ: ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ದಿಂದ ಸೆ 29 ರಂದಿ ನಡೆಯುವ ಪ್ರತಿಭಟನಾ ಧರಣಿಯ ಪೂರ್ವಭಾವಿ ಸಿದ್ಧತೆ ಯನ್ನು ಮಾಜಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ವೀಕ್ಷಿಸಿದರು.
ಈ ಸಭೆಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಹಿಸಲಿದ್ದು ಮಾಜಿ ಸಚಿವ ಎಚ್ ಎಂ ರೇವಣ್ಣ ಸೇೇರಿದಂತೆ ಮುಂತಾದ ಗಣ್ಯರು ಆಗಮಿಸಲಿದ್ದಾರೆ.

ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಮುಖ ಬೇಡಿಕೆಗಳು,
ಎಚ್ ಕಾಂತರಾಜು ಆಯೋಗ ನೇತೃತ್ವದಲ್ಲಿ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿವಾರು ಸಮೀಕ್ಷೆಯ ವರದಿಯನ್ನು ಈ ಕೂಡಲೇ ಬಿಡುಗಡೆ ಮಾಡಬೇಕು, 2 ಎ ಮೀಸಲಾತಿ ಪಟ್ಟಿಗೆ ಯಾವುದೇ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮತ್ತು ಎಲ್ಲಾ ರೀತಿಯಿಂದಲೂ ಮುಂದುವರೆದ ಪ್ರಬಲವಾಗಿರುವ ಜಾತಿಗಳನ್ನು ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು, ವಿಧಾನಸಭೆ ಮತ್ತು ಲೋಕಸಭೆಯಲ್ಲಿ ನೀವು ಸಹ ಎಸ್ಸಿ-ಎಸ್ಟಿ ಗೆ ಮೀಸಲಿಡುವಂತೆ ಹಿಂದುಳಿದ ವರ್ಗಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಮೀಸಲಾತಿ ನೀಡಬೇಕೆಂಬುದು ಸೇರಿದಂತೆ ಅನೇಕ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನಾ ಧರಣಿ ನಡೆಯಲಿದೆ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!