2014ರಲ್ಲಿ ಇಲ್ಲದ ವ್ಯಕ್ತಿಯ ಹೆಸರಿನಲ್ಲಿ ನಕಲಿ ಮರಣ ವರದಿ, ನಕಲಿ ಮರಣ ದಾಖಲೆ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕು ದಾನಿಹಳ್ಳಿ ಗ್ರಾಮದಲ್ಲಿ ಆಸ್ತಿ ಲಪಟಾಯಿಸುವ ಉದ್ದೇಶದಿಂದ 2014ರಲ್ಲಿ ಇಲ್ಲದ ವ್ಯಕ್ತಿಯ ಹೆಸರಿನಲ್ಲಿ ನಕಲಿ ಮರಣ ವರದಿ, ನಕಲಿ ಮರಣ ದಾಖಲೆ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳಾದ ಕಂದಾಯ ನಿರೀಕ್ಷಕ ಮತ್ತು ಜಿಲ್ಲಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಕೀಲ ಕೆ.ಸತೀಶ ಮೈಲಪ್ಪ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ನ್ಯಾಮತಿ
ತಾಲೂಕು ಕಂದಾಯ ನಿರೀಕ್ಷಕ ಸುಧೀರ್ ಭಾಗಿಯಾಗಿದ್ದಾರೆ. ಅಪರಾಧದ ಬಗ್ಗೆ 2017ರಲ್ಲಿ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರೂ
ತಪ್ಪಿತಸ್ಥ ಅಧಿಕಾರಿ ಈವರೆಗೆ ಯಾವುದೇ ಕ್ರಮ ಕೈಗೊಳ್ಳದೆ ತಪ್ಪಿತಸ್ಥ ಗ್ರಾಮ ಲೆಕ್ಕಾಧಿಕಾರಿಗೆ ಕಂದಾಯ ನಿರೀಕ್ಷಕ ಹುದ್ದೆಗೆ ಬಡ್ತಿ ನೀಡಲಾಗಿದೆ ಎಂದು ಕಿಡಿಕಾರಿದರು.

ತಪ್ಪಿತಸ್ಥ ಅಧಿಕಾರಿಯ ರಕ್ಷಣೆಗೆ ನಿಂತಿರುವ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕೂಡ
ಕರ್ತವ್ಯಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಅಧಿಕಾರಿಗಳ ವಿರುದ್ಧ
ಸರ್ಕಾರ ಸೂಕ್ತ ಕಾನೂನು ಕ್ರಮ ಮತ್ತು ಆಡಳಿತಾತ್ಮಕ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!