ಅಂಬ್ಲಿರಾಶಿಗೆ ಮುತ್ತಿನ ಗಿಣಿ ಸಂಪಾದೀತಲೇ ಫರಾಕ್ : ಹರಪನಹಳ್ಳಿ ಮೈಲಾರಲಿಂಗೇಶ್ವರ ಕಾರ್ಣಿಕದ ಉಕ್ತಿ ನಾಳೆ ಮೈಲಾರಲಿಂಗೇಶ್ವರ ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾರ್ಣಿಕ ಹೊರಬೀಳಲಿದೆ

ಹರಪನಹಳ್ಳಿ : “ಅಂಬ್ಲಿರಾಶಿಗೆ ಮುತ್ತಿನ ಗಿಣಿ ಸಂಪಾದೀತಲೇ ಫರಾಕ್” ಇದು ತಾಲೂಕಿನ ಪ್ರಸಿದ್ಧ ಧಾರ್ಮಿಕ ಸುಕೇತ್ರ ಕ್ಷೇತ್ರದಲ್ಲಿ ಮೊಳಗಿದ ಶ್ರೀ ಮೈಲಾರಲಿಂಗೇಶ್ವರ ಸ್ವಾಮೀಯ ಕಾರಣಿಕ ನುಡಿ.
ಪ್ರತಿವರ್ಷ ಭರತ ಹುಣ್ಣಿಮೆಯ ದಿನ ಕಾರ್ಣಿಕ ನುಡಿದಂತೆ ಈ ಬಾರಿ ಬುಧವಾರ ಮೈಲಾರದ ಡೆಂಕನ ಮರಡಿಯಲ್ಲಿ ಅಪಾರ ಭಕ್ತರ ಜಯಘೋಷ ಹರ್ಷೋದ್ಧಾರ ನಡುವೆ ಪ್ರಸಕ್ತ ಸಾಲಿನ ಕಾರಣಿಕ ನುಡಿ ಅನುರಣಿಸಿತು.
ಸುಕ್ಷೇತ್ರದ ಪರಂಪರೆಯ ಸಂಕೇತವಾಗಿರುವ ಬಿಲ್ಲು ಏರಿದ ಗೊರವಯ್ಯ ಕೋಟೆಪ್ಪ ಮೇಲಿನಂತೆ ಕಾರ್ಣಿಕ ನುಡಿದು ದಕ್ಷಿಣ ದಿಕ್ಕಿಗೆ ಹಿಮ್ಮುಖವಾಗಿ ಜಿಗಿದರು. ನೆರೆದಿದ್ದ ಗೊರವ ಸಮೂಹ ಅವರನ್ನು ಕಂಬಳಿಯಲ್ಲಿ ಹಿಡಿದರು.
ಕಾರ್ಣಿಕದ ಅರ್ಥ : ರಾಜ್ಯದಲ್ಲಿ ಸಮೃದ್ಧಿಯಾಗಿ ಮಳೆ, ಬೆಳೆ ಆಗಲಿದ್ದು, ಜನರು ನೆಮ್ಮದಿ, ಸಹಬಾಳ್ವೆಯಿಂದ ಬದುಕುತ್ತಾರೆ ಎಂಬುದಾಗಿದೆ.
ಇನ್ನೂ ನಾಳೆ ಹೂವಿನಹಡಗಲಿಯ ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ ಹೊರಬೀಳಲಿದೆ.