ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಪ್ರಥಮ ಬಜೆಟ್ ಬಡವರ ವಿರೋಧಿ, ಎಂ.ಪಿ.ಲತಾ ಮಲ್ಲಿಕಾರ್ಜುನ್..

WhatsApp Image 2022-03-04 at 7.46.35 PM

ಹರಪನಹಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿರುವ ಪ್ರಥಮ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ ರೈತರಿಗೆ ಯಾವುದೇ ಅನುಕೂಲಗಳನ್ನು ಬಜೆಟ್ ಒಳಗೊಂಡಿಲ್ಲ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅಭಿಪ್ರಾಯ ಪಟ್ಟಿದ್ದಾರೆ.

ಬಜೆಟ್ ನಲ್ಲಿ ಉದ್ಯೋಗ ಸೃಷ್ಟಿಗೆ ಯಾವುದೇ ಕ್ರಮವಿಲ್ಲ, ಪರಿಶಿಷ್ಟ ಜಾತಿ-ಜನಾಂಗದವರ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಪೂರಕ ಅಂಶಗಳಿಲ್ಲ, ಕೇವಲ ಆಯ-ವ್ಯಯ ವನ್ನು ಬಿಟ್ಟರೆ ರಾಜ್ಯದ ಸಮಗ್ರ ಆರ್ಥಿಕ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಲಾಗಿದೆ. ಇದು ಸಂಪೂರ್ಣವಾಗಿ ರೈತರ, ವಿದ್ಯಾರ್ಥಿಗಳ,ಬಡವರ ವಿರೋಧಿ ಬಜೆಟ್ ಎಂದು ಎಂ.ಪಿ.ಲತಾ ಮಲ್ಲಿಕಾರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ..

Leave a Reply

Your email address will not be published. Required fields are marked *

error: Content is protected !!