ಕಬ್ಬಿಗೆ ಎಫ್‌ಆರ್‌ಪಿ ದರ ಪುನರ್‌ಪರಿಶೀಲನೆಗೆ ಸಿಎಂ ಭರವಸೆ; ಕುರುಬೂರು ಶಾಂತಕುಮಾರ್

For revision of FRP rate for sugarcane CM promises; Kuruburu Shanthakumar

ದಾವಣಗೆರೆ: ಕಬ್ಬಿಗೆ ಎಫ್‌ಆರ್‌ಪಿ ದರ ಪುನರ್‌ಪರಿಶೀಲನೆ ನಡೆಬೇಕೆಂಬುದು ಸೇರಿದಂತೆ ರೈತರ ವಿವಿಧ ಬೇಡಿಕೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಕಳೆದ ೨೩ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಬ್ಬು ಬೆಳೆಗಾರ ಮುಖಂಡರ ಜೊತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚರ್ಚೆ ನಡೆಸಿದ್ದು ಕಬ್ಬುದರ ಏರಿಕೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಕಬ್ಬಿನ ಉತ್ಪನ್ನಗಳ ಲಾಭ ಹೆಚ್ಚುವರಿ ೫೦ ರೂ., ಮಾಡಿರುವುದನ್ನು ಸರ್ಕಾರ ಸದ್ಯದಲ್ಲೇ ಪುನರ್‌ಪರಿಶೀಲಿಸಿ, ಹೆಚ್ಚುದರ ನಿಗದಿ ಮಾಡುತ್ತದೆ. ಕಬ್ಬು ಕಟಾವು, ಸಾಗಾಣಿಕೆ ವೆಚ್ಚ ಏರಿಕೆಯಾಗಿರುವ ಬಗ್ಗೆ ವರದಿ ಪಡೆದು ಅದನ್ನು ಕಡಿಮೆ ಮಾಡಲಾಗುವುದು ಹಾಗೂ ತೂಕದಲ್ಲಿ ಮೋಸ ತಡೆಗಟ್ಟಲು ಎಲ್ಲ ಸಕ್ಕರೆ ಕಾರ್ಖಾನೆಗಳ ಮುಂದೆ ಸರ್ಕಾರದ ವತಿಯಿಂದ ಎಪಿಎಂಸಿಗಳ ಮೂಲಕ ತೂಕದ ಯಂತ್ರ ಸ್ಥಾಪಿಸಲಾಗುವುದು. ಆದ್ದರಿಂದ ರೈತರು ಧರಣಿ ಕೈಬಿಡಬೇಕೆಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ಶಾಂತಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ, ಅದಕ್ಕಾಗಿ ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ, ಪಾಲಿಸಬೇಕು ನಿಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತದೆ ಸಿಎಂ ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವಾಗ ಆರೋಗ್ಯ ಸಚಿವ ಸುಧಾಕರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಡಿಸಿಪಿ ಲಕ್ಷ್ಮಣ್ ನಿಂಬರಗಿ, ರೈತ ಮುಖಂಡರುಗಳಾದ
ವೀರನಗೌಡ ಪಾಟೀಲ್, ನಂದಿತಾವರೆ ಮುರುಗಯ್ಯ, ಕುಮಾರ್ ಬುಬಾಟಿ, ಅಂಜನಪ್ಪ ಪೂಜಾರ,
ಗುರುಸಿದ್ದಪ್ಪ ಕೋಟಗಿ, ಹತ್ತಳ್ಳಿ ದೇವರಾಜ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!