ಮತ್ತೆ ಮಳೆಯಾಗುವ ಮುನ್ಸೂಚನೆ!

rain

ದಾವಣಗೆರೆ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಕಾಸರಗೋಡು ಹಾಗೂ ಕೊಡಗು ಸೇರಿದಂತೆ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು, ಮೂಡಬಿದರೆ, ಕಾರ್ಕಳ, ಧರ್ಮಸ್ಥಳ ಸುತ್ತಮುತ್ತ ಹಾಗೂ ಉಳಿದ ದಕ್ಷಿಣ ಕನ್ನಡದ ಭಾಗಗಳಲ್ಲಿ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಅಷ್ಟೇಅಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಆಗಲಿದೆ. ಮೇ. 24ರ ನಂತರ ದಿನದ ಹೆಚ್ಚಿನ ಅವಧಿ ಬಿಸಿಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂಗಾರು ಪ್ರವೇಶ:
ರಾಜ್ಯದಲ್ಲಿ ಈಗಾಗಲೇ ಮುಂಗಾರು ವಾತಾವರಣ ಇದ್ದು ಮೇ. 27ರಿಂದ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೂ ಆರಂಭದ 10, 12 ದಿನಗಳವರೆಗೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!