ಅಪರಾಧದಾವಣಗೆರೆರಾಜ್ಯ / ಕರ್ನಾಟಕ

Gang Rape: ದಾವಣಗೆರೆ ಜಿಲ್ಲೆಯಲ್ಲಿ ಘೋರ ಕೃತ್ಯ: ಮಹಿಳೆಗೆ ತಂಪು ಪಾನೀಯದಲ್ಲಿ ಮತ್ತು ಸೇರಿಸಿ ಗ್ಯಾಂಗ್ ರೇಪ್; ಅಪ್ರಾಪ್ತ ಸೇರಿ 10 ಕಾಮುಕರು ಅರೆಸ್ಟ್

Share
Share

ದಾವಣಗೆರೆ: (Gang Rape) ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಅಮಾನುಷ ಹಾಗೂ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ತವರೂರಿಗೆ ಹೊರಟಿದ್ದ 41 ವರ್ಷದ ವಿವಾಹಿತ ಮಹಿಳೆಗೆ ತಂಪು ಪಾನೀಯದಲ್ಲಿ ಅಮಲು ಪದಾರ್ಥ ನೀಡಿ, ಜಮೀನಿಗೆ ಅಪಹರಿಸಿ ಹತ್ತು ಮಂದಿ ಪಾಪಿಗಳು ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಎಸಗಿದ್ದಾರೆ. ಅಷ್ಟೇ ಅಲ್ಲದೆ, ಸಂತ್ರಸ್ತೆಯ ಬೆತ್ತಲೆ ವೀಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ವಿಕೃತಿ ಮೆರೆದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶೇಖರ್ ಟಿ. ರವರ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿರುವ ಬಸವಾಪಟ್ಟಣ ಪೊಲೀಸರು, ಒಟ್ಟು 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಕಂಬಿ ಹಿಂದೆ ತಳ್ಳಿದ್ದಾರೆ

ಪ್ರಕರಣದ ಹಿನ್ನೆಲೆ ಮತ್ತು ಕೃತ್ಯದ ವಿವರ:

ಮೂಲಗಳ ಪ್ರಕಾರ, ಜೂನ್ 3 ರಂದು ಸಂಜೆ ಸಂತ್ರಸ್ತೆಯ ಗಂಡ ಮದ್ಯಪಾನ ಮಾಡಿ ಮನೆಗೆ ಬಂದಿದ್ದರಿಂದ ದಂಪತಿಗಳ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ತೀವ್ರ ಬೇಸರಗೊಂಡ ಮಹಿಳೆ ನೇರಲಗುಂಡಿ ಗ್ರಾಮದಿಂದ ನಡೆದುಕೊಂಡು ತನ್ನ ತವರೂರಾದ ಯಲೋದಹಳ್ಳಿ ಗ್ರಾಮಕ್ಕೆ ಹೊರಟಿದ್ದರು. ರಾತ್ರಿ ಸುಮಾರು 7.30 ರ ವೇಳೆಗೆ ಯಲೋದಹಳ್ಳಿ ಗ್ರಾಮದ ಚಿಕನ್ ಅಂಗಡಿ ಬಳಿ ಮಹಿಳೆ ಅಳುತ್ತಾ ನಿಂತಿರುವುದನ್ನು ಗಮನಿಸಿದ ಸ್ಥಳೀಯ ಹುಡುಗನೊಬ್ಬ, “7-Up (ತಂಪು ಪಾನೀಯ) ಕುಡಿಯುತ್ತೀಯಾ ಅಕ್ಕ?” ಎಂದು ಕೇಳಿದ್ದಾನೆ. ನಡೆದು ಸುಸ್ತಾಗಿದ್ದ ಮಹಿಳೆ ಅದನ್ನು ಕುಡಿದ ತಕ್ಷಣ ಪ್ರಜ್ಞೆ ತಪ್ಪಿದ್ದಾರೆ.

ಬಳಿಕ ಆ ಹುಡುಗ ಮತ್ತು ಅವನ ಜೊತೆಯಲ್ಲಿದ್ದ ಮತ್ತೊಬ್ಬ ಸಂತ್ರಸ್ತೆಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಯಲೋದಹಳ್ಳಿ ಗ್ರಾಮದ ಬಳಿಯ ಜಮೀನಿಗೆ ಕರೆದೊಯ್ದಿದ್ದಾರೆ. ಅಲ್ಲಿ ಮೊದಲೇ ಹೊಂಚು ಹಾಕಿ ಕುಳಿತಿದ್ದ ಕಾಮುಕರ ತಂಡ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯ ಮೇಲೆ ಜೂನ್ 3 ರ ರಾತ್ರಿಯಿಂದ ಜೂನ್ 4 ರ ಮುಂಜಾನೆ 3.20 ರವರೆಗೆ ಸತತವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ ಸಂತ್ರಸ್ತೆಯ ಬೆತ್ತಲೆ ಫೋಟೋ ಹಾಗೂ ವೀಡಿಯೋಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಮುಂಜಾನೆ ಮಹಿಳೆಗೆ ಎಚ್ಚರವಾದಾಗ ಅವರು ಅಲ್ಲಿಂದ ತಪ್ಪಿಸಿಕೊಂಡು ಅಣ್ಣನ ಮನೆಗೆ ತಲುಪಿದ್ದಾರೆ.

ವೀಡಿಯೋ ವೈರಲ್: ತಡವಾಗಿ ಬೆಳಕಿಗೆ ಬಂದ ಸತ್ಯ!
ನಾಚಿಕೆಯಿಂದ ಮಹಿಳೆ ಈ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ. ಆದರೆ ಜೂನ್ 8 ರಂದು ಸಂತ್ರಸ್ತೆಯ ಅಣ್ಣನ ಮಗ ಸತೀಶನು ಫೋನ್ ಮಾಡಿ, “ನಿನ್ನ ಬೆತ್ತಲೆ ವೀಡಿಯೋ ಮತ್ತು ಫೋಟೋಗಳು ಗ್ರಾಮಸ್ಥರ ಮೊಬೈಲ್‌ನಲ್ಲಿ ಹರಿದಾಡುತ್ತಿವೆ (ವೈರಲ್ ಆಗಿವೆ)” ಎಂದು ಹೇಳಿದಾಗ ಮಹಿಳೆಗೆ ಆಘಾತವಾಗಿದೆ. ತಕ್ಷಣವೇ ಗ್ರಾಮಕ್ಕೆ ಬಂದು ವಿಚಾರಿಸಿದಾಗ ಹತ್ತು ಮಂದಿ ಪಾಪಿಗಳು ಸೇರಿ ಈ ಕೃತ್ಯ ಎಸಗಿರುವುದು ದೃಢಪಟ್ಟಿದೆ. ತಕ್ಷಣವೇ ಮಹಿಳೆ ಬಸವಾಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಬಂಧಿತ ಆರೋಪಿಗಳ ವಿವರ:
ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಐಸಿ/ಬಿಎನ್‌ಎಸ್ ಕಲಂ 70, 77 ರೆ/ವಿ 190 ಹಾಗೂ ಐಟಿ ಆಕ್ಟ್ ಕಲಂ 67(ಎ) ಅಡಿಯಲ್ಲಿ ಗುನ್ನೆ ನಂ. 88/2026 ರಂತೆ ಪ್ರಕರಣ ದಾಖಲಾಗಿದ್ದು, ಯಲೋದಹಳ್ಳಿ ಗ್ರಾಮದ ನಿವಾಸಿಗಳಾದ 10 ಜನರನ್ನು ಬಂಧಿಸಲಾಗಿದೆ, (ಬಂಧಿತ ಹತ್ತು ಆರೋಪಿಗಳಲ್ಲಿ ಒಬ್ಬಾತ ಅಪ್ರಾಪ್ತ (ಮೈನರ್) ಬಾಲಕನಾಗಿದ್ದಾನೆ.

ದಾವಣಗೆರೆ ಎಸ್ ಪಿ ಶೇಖರ್ ಟಿ. ಅವರ ಅಧಿಕೃತ ಪ್ರತಿಕ್ರಿಯೆ (SP Reaction):

ಈ ಭೀಕರ ಘಟನೆಯ ಕುರಿತು ಮಾಧ್ಯಮಗಳಿಗೆ ಅಧಿಕೃತ ಹೇಳಿಕೆ ನೀಡಿರುವ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶೇಖರ್ ಟಿ. ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
> “ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆ ಒಟ್ಟು 10 ಜನರ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಎಲ್ಲಾ 10 ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಜೂನ್ 3 ರಂದು ರಾತ್ರಿ 7.30 ರ ಸುಮಾರಿಗೆ ಆರೋಪಿಗಳು ಮಹಿಳೆಗೆ ತಂಪು ಪಾನೀಯ ನೀಡಿದ್ದು, ಅದನ್ನು ಕುಡಿದು ಆಕೆ ಪ್ರಜ್ಞೆ ತಪ್ಪಿದಾಗ ಬೈಕ್‌ನಲ್ಲಿ ಜಮೀನಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ತದನಂತರ ಈ ಕೃತ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದನ್ನು ಆಧರಿಸಿ ಮಹಿಳೆ ದೂರು ದಾಖಲಿಸಿದ್ದಾರೆ. ವೀಡಿಯೋ ಮಾಡಿದವರು, ವೀಡಿಯೋ ಮಾಡಲು ಸಹಕರಿಸಿದವರು ಹಾಗೂ ಅತ್ಯಾಚಾರ ಎಸಗಿದವರು ಸೇರಿದಂತೆ ಎಲ್ಲರನ್ನೂ ದೂರಿನನ್ವಯ ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬ ಮೈನರ್ ಇದ್ದಾನೆ. ಸದ್ಯ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದೆ” ಎಂದು ಎಸ್ ಪಿ ಸ್ಪಷ್ಟಪಡಿಸಿದ್ದಾರೆ.

ಬಸವಾಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ ಇಮ್ತಿಯಾಜ್ ಮತ್ತು ಶ್ರೀಮತಿ ಭಾರತಿ ಜೆ.ಇ ಅವರ ನೇತೃತ್ವದ ತಂಡ ಪ್ರಕರಣದ ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೆತ್ತಿಕೊಂಡಿದೆ. ಕಾಮುಕರ ಈ ವಿಕೃತ ಚೇಷ್ಟೆಗೆ ದಾವಣಗೆರೆ ಜಿಲ್ಲಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ವರದಿ: ಕುಮಾರ್ ಹೆಚ್ ಎಂ ಪಿ (Copyright projected)

 

Share

Leave a comment

Leave a Reply

Your email address will not be published. Required fields are marked *

Don't Miss

ದೇಶ

Women:ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

*ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ* ಬೆಂಗಳೂರು :(Women) ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ದಾವಣಗೆರೆ

Water: ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಜಿಲ್ಲೆಯ 103 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸಿಇಒ ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: (Water Crisis) ಜಿಲ್ಲೆಯಲ್ಲಿ ಬೇಸಿಗೆಯ ಹಿನ್ನೆಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಈ ನಿಟ್ಟಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ...

Related Articles
ಅಪರಾಧರಾಜ್ಯ / ಕರ್ನಾಟಕ

Sand: ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಾಯುಕ್ತರ ಭರ್ಜರಿ ಬೇಟೆ: 25ಕ್ಕೂ ಹೆಚ್ಚು ಅಕ್ರಮ ಮರಳು ಕ್ವಾರಿಗಳ ಮೇಲೆ ದಾಳಿ, 50ಕ್ಕೂ ಹೆಚ್ಚು ವಾಹನಗಳ ಜಪ್ತಿ!

​ಶಿವಮೊಗ್ಗ:(Sand) ಶಿವಮೊಗ್ಗ ಜಿಲ್ಲೆಯಲ್ಲಿ ದೀರ್ಘಕಾಲದಿಂದ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ದಂಧೆಗೆ ಲೋಕಾಯುಕ್ತ ಪೊಲೀಸರು ಮರಣಶಾಸನ ಬರೆದಿದ್ದಾರೆ....

ದಾವಣಗೆರೆರಾಜ್ಯ / ಕರ್ನಾಟಕ

Transfer: ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆ: ದಾವಣಗೆರೆ ಜಿಲ್ಲೆಯ ವಿವರಗಳು

ದಾವಣಗೆರೆ: (Transfer) ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ರಾಜ್ಯದ ಹಲವು ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಇಂದು...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Road: ರಸ್ತೆ ಸುರಕ್ಷತೆ ಮತ್ತು ಕಾನೂನುಬದ್ಧ ವಾಹನ ನಿರ್ವಹಣೆ. ದ್ವಿಚಕ್ರ ವಾಹನಗಳಿಗೆ ಸೀಮಿತವಾದ ತಪಾಸಣೆ.!

ದಾವಣಗೆರೆ: ( Road) ಭಾರತೀಯ ರಸ್ತೆಗಳಲ್ಲಿ ಸಂಚರಿಸುವ ಪ್ರತಿ ವಾಹನವು ನಿರ್ದಿಷ್ಟ ಸುರಕ್ಷತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ....

ದಾವಣಗೆರೆ

Corporation: ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳನ್ನು 7 ದಿನಗಳೊಳಗೆ ತೆರವುಗೊಳಿಸಸಲು ಪಾಲಿಕೆ ಆಯುಕ್ತರ ಆದೇಶ

ದಾವಣಗೆರೆ: (Corporation):  ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳಿಂದ ಸಂಭವಿಸಬಹುದಾದ ಮುಂಜಾಗ್ರತಾ ಹಾನಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿರುವ ಸಂಪೂರ್ಣ ಕಟ್ಟಡ ಅಥವಾ ಕಟ್ಟಡದ ಭಾಗವನ್ನು ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿತೆರವುಗೊಳಿಸಬೇಕು ಅಥವಾ ರಿಪೇರಿ ಮಾಡಿಕೊಳ್ಳಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯನ್ವಯ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ ಕೆಲವು ಕಟ್ಟಡಗಳು ಸಾರ್ವಜನಿಕರಿಗೆ ಹಾಗೂ ನೆರೆ-ಹೊರೆಯ ಆಸ್ತಿಪಾಸ್ತಿಗಳಿಗೆ ಅಪಾಯವನ್ನುಂಟು ಮಾಡುವ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸದರಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಅಥವಾ ಅದರ ಭಾಗದಿಂದ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿದಲ್ಲಿ ಅದಕ್ಕೆ ಸಂಬಂಧಪಟ್ಟ ಮಾಲೀಕರು ಅಥವಾ ಅನುಭೋಗದಾರರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಆ್ಯಕ್ಟ್ 1976ರ ಸೆಕ್ಷನ್ 322ರ ಅನ್ವಯ, ಮಾಲೀಕರು ತಕ್ಷಣವೇ ಕಟ್ಟಡದ ರಿಪೇರಿ/ತೆರವು ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆಯಾಗಿ ಕಟ್ಟಡದ ಸುತ್ತಲೂ ಸುರಕ್ಷತಾ ಬೇಲಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನಿಗದಿತ 07 ದಿನಗಳ ಅವಧಿಯೊಳಗೆ ಮಾಲೀಕರು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಯಾವುದೇ ಪೂರ್ವಭಾವಿ ನೋಟೀಸ್ ನೀಡದೆ ಪಾಲಿಕೆ ವತಿಯಿಂದಲೇ ಸಂಪೂರ್ಣ ಕಟ್ಟಡ ಅಥವಾ ಅದರ ಭಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ಮಾಲೀಕರು/ಅನುಭೋಗದಾರರಿಂದಲೇ ವಸೂಲಿ ಮಾಡಲಾಗುವುದು. ಇಂತಹ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಒಳಗೆ ಸಾರ್ವಜನಿಕರು ಪ್ರವೇಶಿಸಬಾರದು ಹಾಗೂ ಇಂತಹ ಅಪಾಯಕಾರಿ ಕಟ್ಟಡಗಳ ಸುತ್ತಮುತ್ತ ಸಂಚರಿಸುವಾಗ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್‌  ತಿಳಿಸಿದ್ದಾರೆ.