ಆಂಧ್ರದಿಂದ ಗಾಂಜಾ ಮಾರಾಟ ಮಾಡಲು ಬಂದು ಭದ್ರಾವತಿಯ ಪೊಲೀಸರಿಗೆ ಸಿಕ್ಕಿಬಿದ್ರು.
ಶಿವಮೊಗ್ಗ: ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿರುವಾಗ ಗಾಂಜಾ ಮಾರಾಟ ಮಾಡಲು ಗಾಂಜಾ ಸಾಗಿಸುತ್ತಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಭದ್ರಾವತಿ ಕಡೆಯಿಂದ ಬಂದ ಬುಲೆರೋ ಪಿಕಪ್ ವಾಹನ ನಂಬರ್ KA14 C 2174 ನ್ನು ನಿಲ್ಲಿಸಲು ಸೂಚಿಸಿದರು ನಿಲ್ಲಿಸಿದೆ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಸಿ ಗಲಾಟೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಆರೋಪಿಗಳು.
ಈ ವೇಳೆ ಅವರನ್ನು ತಡೆದು ವಿಚಾರಣೆ ಮಾಡಿದ ಸಮಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶದ ತುಣಿ ಎಂಬ ಊರಿನ ಹತ್ತಿರದ ಹಳ್ಳಿಯಿಂದ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತರುತ್ತಿರುವುದಾಗಿ ಆರೋಪಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಾಹನವನ್ನು ತಪಾಸಣೆ ಮಾಡಿದಾಗ ಗಾಂಜಾ ಇರುವುದು ಕಂಡುಬಂದಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಅಂದಾಜು 3 ಲಕ್ಷ ಮೌಲ್ಯದ 20 ಕೆಜಿ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ ಬುಲೆರೋ ಪಿಕಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಕಲಂ 353 ಐಪಿಸಿ, 8(C),20(B)(ii)(C)NDPS ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.