ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಗುಡ್‌ ನ್ಯೂಸ್‌ ; ಪಿಎಂ ಕಿಸಾನ್ ನಿಧಿಯ ಅನುದಾನ ಬಿಡುಗಡೆ ಕಡತಕ್ಕೆ ಸಹಿ

ಹೊಸ ಸರ್ಕಾರದ ನಾಯಕರಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನಿಯಾಗಿ ಪ್ರಮಾಣವಚನ ಸ್ವೀ ಕರಿಸಿದ್ದರು. ಇಂದು ಸೋಮವಾರ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಮೋದಿ ಆರಂಭಿಸಿದ್ದಾರೆ. ಮೊದಲ ದಿನವೇ ಪಿಎಂ ಕಿಸಾನ್ ನಿಧಿಯ ಅನುದಾನ ಬಿಡುಗಡೆ ಕಡತಕ್ಕೆ ಸಹಿ ಹಾಕಿರುವುದಾಗಿ ವರದಿಯಾಗಿದೆ.

ಮೋದಿ ಅವರು ಕಿಸಾನ್ ಸಮ್ಮನ್ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ನೀಡುವ ತಮ್ಮ ಮೊದಲ ಫೈಲ್‌ಗೆ ಸಹಿ ಹಾಕಿದರು.
ಒಟ್ಟು 9.3 ಕೋಟಿ ರೈತರಿಗೆ ಹಣ ಸಿಗಲಿದೆ. ಮೋದಿ ಅವರು ಒಟ್ಟು 20,000 ಕೋಟಿ ರೂ. ಹಣ ಬಿಡುಗಡೆಗೆ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ. 4 ತಿಂಗಳಿಗೊಮ್ಮೆ2 ಸಾವಿರ ರೂ. ವರ್ಷಕ್ಕೆ 6 ಸಾವಿರ ರೂ. ನಿಧಿಯ ಮೂಲಕ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ.

ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಪ್ರಧಾನಿ ಮೋದಿ ಹಾಗೂ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

Leave a Reply

Your email address will not be published. Required fields are marked *

error: Content is protected !!