ಭೀಕರ ಅಪಘಾತದಲ್ಲಿ ಸರ್ಕಾರಿ ನೌಕರ ಸಾವು!

ಜಗಳೂರು : ಮೂತ್ರ ವಿಸರ್ಜನೆ ಮಾಡಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ರಸ್ತೆಮಾಚಿಕೆರೆ ಗ್ರಾಮದ ಬಳಿ ಶನಿವಾರ ರಾತ್ರಿ ನಡೆದಿದೆ. ಬಿಳಿಚೋಡು ಗ್ರಾಮದ ನಿವಾಸಿ 27 ವರ್ಷದ ಯೋಗೇಶ್ ಮೃತ ವ್ಯಕ್ತಿಯಾಗಿದ್ದು ಈತ ಜಗಳೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದರು. ಈತ ನಿನ್ನೆ ಸಂಜೆ ಎಂದಿನ0ತೆ ಕೆಲಸ ಮುಗಿಸಿ ಬಸ್‌ನಲ್ಲಿ ತೆರಳುತ್ತಿದ್ದರು. ರಸ್ತೆಮಾಚಿಕೆರೆ ಗ್ರಾಮದ ಕೆರೆ ಏರಿ ಬಳಿ ಮೂತ್ರ ವಿಸರ್ಜನೆ ಮಾಡಿ ವಾಪಾಸ್ ಬರುವಾಗ ವೇಗವಾಗಿ ಬಂದ ಖಾಸಗಿ ಶಾಲಾ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಘಟನೆ ಸಂಬ0ಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!