ಚಿತ್ರದುರ್ಗ ಮುರುಘಾಮಠಕ್ಕೆ ನಿವೃತ್ತ ಐ ಎ ಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ “ಆಡಳಿತಾಧಿಕಾರಿ” ಯನ್ನಾಗಿ ನೇಮಿಸಿದ ಸರ್ಕಾರ

The government appointed a retired IAS officer, PS Vastrad as the "administrator" of the Chitradurga Muruga Math.

ಬೆಂಗಳೂರು: ದಿನಾಂಕ:17.10.2022 & 20.10.2022ರ ಜಿಲ್ಲಾಧಿಕಾರಿ, ಚಿತ್ರದುರ್ಗ ಜಿಲ್ಲೆ ಇವರ ವರದಿಯಲ್ಲಿ ಚಿತ್ರದುರ್ಗ ಜಿಲ್ಲೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಿನಾಂಕ:26.08.2022ರಂದು ಮತ್ತು 13.10.2022ರಂದು ಮೈಸೂರು ನಗರದ ನಜರಾಬಾದ್ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ:155/2022, ದಿನಾಂಕ:26.08.2022 ಮತ್ತು ಅಪರಾಧ ಸಂಖ್ಯೆ:182/2022, ದಿನಾಂಕ:13.10.2022ರಲ್ಲಿ Protection of childrens from sexual offences Act 2012 (U/s 17, 5(L), 6, 7) ( ) IPC 1860 (U/s 376(2) (n)376(3), 149) ಅಡಿಯಲ್ಲಿ ಕೇಸು ದಾಖಲಾಗಿದ್ದು, ಸದರಿ ಪ್ರಕರಣವು ಚಿತ್ರದುರ್ಗ ಜಿಲ್ಲೆಗೆ ವರ್ಗಾವಣೆಯಾಗಿ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಇರುವುದಾಗಿ ಹಾಗೂ ಸದರಿ ಕೇಸ್ ಸಂಬಂಧ ಶ್ರೀ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದಲ್ಲಿ ಇರುವುದಾಗಿ ನೀಡಿರುತ್ತಾರೆ.

ಈ ಸಂಬಂಧ ಮೇಲೆ ಓದಲಾದ (2)ರಲ್ಲಿನ ಮಾನ್ಯ ಅಡ್ವಕೇಟ್ ಜನರಲ್, ಕರ್ನಾಟಕ, ಬೆಂಗಳೂರು ಇವರ ಅಭಿಪ್ರಾಯವನ್ನು ಕೋರಲಾಗಿದ್ದು, ಟ್ರಸ್ಟಿಯಾಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಟ್ರಸ್ಟಿನ ಸ್ವತ್ತನ್ನು ರಕ್ಷಿಸುವ ದೃಷ್ಟಿಯಿಂದ ಭಾರತ ಸಂವಿಧಾನದ ಅನುಚ್ಛೇದ162ರನ್ವಯ ಸರ್ಕಾರವು ಸದರಿ ಸಂಸ್ಥೆಗೆ ಆಡಳಿತಾಧಿಕಾರಿಯನ್ನು ನೇಮಿಸಬಹುದೆಂದು ಅಭಿಪ್ರಾಯ ಪಟ್ಟಿರುತ್ತಾರೆ.

ಜಿಲ್ಲಾಧಿಕಾರಿ, ಚಿತ್ರದುರ್ಗ ಜಿಲ್ಲೆ ಇವರಿಗೆ ಸದರಿ ಪ್ರಕರಣದಲ್ಲಿ ವಾಸ್ತವ ಸ್ಥಿತಿ ವರದಿಯನ್ನು ಸ್ಪಷ್ಟ ಅಭಿಪ್ರಾಯದೊಂದಿಗೆ ಸಲ್ಲಿಸುವಂತೆ ಕೋರಲಾಗಿತ್ತು.ಮೇಲೆ ಓದಲಾದ (1)ರಲ್ಲಿ ದಿನಾಂಕ: 10,11,2022ರಲ್ಲಿನ ಜಿಲ್ಲಾಧಿಕಾರಿ, ಚಿತ್ರದುರ್ಗ ಜಿಲ್ಲೆ ವರದಿಯಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠ, ಚಿತ್ರದುರ್ಗ ಇಲ್ಲಿನ ಇವರ ಟ್ರಸ್ಟಿಯಾಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ಇವರು ದಿನಾಂಕ:01.09.2022 ರಿಂದ ನ್ಯಾಯಾಂಗ ಬಂಧನದಲ್ಲಿರುವುದರಿಂದ ಮಠದ ಒಟ್ಟು ಸ್ಥಿರಾಸ್ತಿಗೆ ಮತ್ತು ಮಠದ ಹಣಕಾಸು ನಿರ್ವಹಣೆಯನ್ನು ನೋಡಿಕೊಳ್ಳುವುದು ಕಷ್ಟಕರವಾಗಿರುತ್ತದೆ ಹಾಗೂ ಈ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್ ಆಗಿರುವುದರಿಂದ ಆಸ್ತಿಗಳ ನಿರ್ವಹಣೆಗಳ ತೊಡಕುಂಟಾಗುತ್ತಿದೆ ಹಾಗೂ ದುರಾಡಳತ ಹಾಗೂ ಹಣಕಾಸು ದುರುಪಯೋಗ ಆದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ದಕ್ಷೆಯಾಗುವ ಸಂಭವ ಇರುತ್ತದೆ. ಆದ ಕಾರಣ ಟ್ರಸ್ಟ್ ಮತ್ತು ವಿದ್ಯಾಸಂಸ್ಥೆಯ ನಿರ್ವಹಣೆಗೂ ಸಹ ತೊಂದರೆ ಉಂಟಾಗುತ್ತದೆ. ಸದರಿ ಸಂಸ್ಥೆಗೆ ಶ್ರೀ ಶಿವಮೂರ್ತಿ ಮುರುಘಾ ಶರಣರು ಮಠದ ಅಜೀವ ಪೀಠಾಧಿಪತಿ ಹಾಗೂ ವಿದ್ಯಾ ಸಂಸ್ಥೆಗೆ ಅಜೀವ ಅಧ್ಯಕ್ಷರು ಆಗಿರುವುದರಿಂದ ಮಠದ ಹಾಗೂ ವಿದ್ಯಾ ಸಂಸ್ಥೆಗಳ ಅನಾನುಕೂಲಗಳನ್ನು ತಪ್ಪಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವುದು ಅವಶ್ಯಕತೆ ಇದೆ ಎಂದು ವರದಿಯಲ್ಲಿ ತಿಳಿಸಿರುತ್ತಾರೆ.

ಸರ್ಕಾರವು ಮಾನ್ಯ ಅಡ್ವಕೇಟ್ ಜನರಲ್, ಕರ್ನಾಟಕ, ಬೆಂಗಳೂರು ಇವರ ಅಭಿಪ್ರಾಯ ಹಾಗೂ ಜಿಲ್ಲಾಧಿಕಾರಿ, ಚಿತ್ರದುರ್ಗ ಜಿಲ್ಲೆ ಇವರ ವರದಿ ಹಾಗೂ ದಾಖಲಾತಿಗಳನ್ನು ಪರಿಶೀಅಸಿ, ಸಾರ್ವಜನಿಕ ಹಿತಾಸಕ್ತಿಗೆ ದಕ್ಕೆಯಾಗುವ ಸಂಭವವಿರುವುದರಿಂದ ಮಠದ ಆಡಳಿತದಲ್ಲಿ ಅವ್ಯವಹಾರ ಹಾಗೂ ಹಣಕಾಸಿನ ದುರುಪಯೋಗ ಹಾಗೂ ಆಸ್ತಿಗಳ ಪರಬಾರ ಹಿನ್ನೆಲೆಯಲ್ಲಿ ಭಾರತ ಸಂವಿಧಾನ ಅನುಚ್ಛೇದ 162, 31(ಎ) ರನ್ವಯ ಸಾರ್ವಜನಿಕ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಿಸುವುದು ಅವಶ್ಯಕವಿರುವುದರಿಂದ ಶ್ರೀ ಪಿ.ಎಸ್.ವಸ್ತ್ರದ್, ಐ.ಎ.ಎಸ್ (ನಿವೃತ್ತರು), ಬೆಂಗಳೂರು ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲು ಸರ್ಕಾರವು ನಿರ್ಧರಿಸಿದೆ ಅದರಂತೆ ಈ ಕೆಳಕಂಡ ಆದೇಶ.

ಸರ್ಕಾರದ ಆದೇಶ ಸಂಖ್ಯೆ: ಕಂಇ 112 ಮುಸೇವಿ 2022 ಬೆಂಗಳೂರು, ದಿನಾಂಕ:13-12-2022

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ದಿನಾಂಕ:01.09.2022 ರಿಂದ ನ್ಯಾಯಾಂಗ ಬಂಧನದಲ್ಲ. ಇರುವುದರಿಂದ ಸದರಿ ಸಂಸ್ಥೆಯ ನಿರ್ವಹಣಿಯಲ್ಲಿ ಈ ಸಂಸ್ಥೆಯ ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರಾ-ಸ್ಥಿರ ಆಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಟಿಯಿಂದ ಭಾರತ ಸಂವಿಧಾನ ಅನುಚ್ಛೇದ 162, 31(ಎ)ರನ್ವಯ ಶ್ರೀ ಪಿ.ಎಸ್.ವಸ್ತ್ರದ್ ಐ.ಎ.ಎಸ್ (ನಿವೃತ್ತರು), Race Course Road, Bangalore-560001 ಇವರನ್ನು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸದರಿ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ “ಆಡಳಿತಾಧಿಕಾರಿ” ಯನ್ನಾಗಿ ನೇಮಿಸಿ ಆದೇಶಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!