ಸರ್ಕಾರಿ ಸಮಾರಂಭಗಳಲ್ಲಿ ಹಾರ ತುರಾಯಿ ಶಾಲು ನೀಡುವಂತಿಲ್ಲ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಮಹತ್ತರವಾದ ದಿಟ್ಟ ಹೆಜ್ಜೆ ಇಟ್ಟಿದಾರೆ.
ಈಗ ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳು ಹಾಗೂ ಕಾರ್ಯಕ್ರಮದಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ, ಯಾವುದು ನೀಡಬಾರದು,
ಅದರ ಬದಲು ಕನ್ನಡದ ಪುಸ್ತಕ ನೀಡಬಹುದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ರವಿ ಕುಮಾರ್ ಸುತ್ತೋಲೆಯನ್ನು ಸಂಬಂಧಪಟ್ಟ ಇಲಾಖಾವಾರು ಗಳಿಗೆ ಲಿಖಿತರೂಪದಲ್ಲಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ