ದಾವಣಗೆರೆ ಜರೀಕಟ್ಟೆ ಗ್ರಾಮದಲ್ಲಿ ಗ್ರಾಮವಾಸ್ತವ್ಯ 

ದಾವಣಗೆರೆ : ಜೂ.18 ರಂದು ದಾವಣಗೆರೆ ತಾಲ್ಲೂಕಿನ ತಹಶೀಲ್ದಾರ್‍ರವರು ಒಳಗೊಂಡಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ದಾವಣಗೆರೆ ತಾಲ್ಲೂಕು ಕಸಬಾ ದಕ್ಷಿಣ ಹೋಬಳಿ ಜರೀಕಟ್ಟೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡುವರು. ಅಂದು ಜರೀಕಟ್ಟೆ ಗ್ರಾಮದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಪರಿಹರಿಸಿ ಕೊಳ್ಳಬಹುದು. ಆದ್ದರಿಂದ ಗ್ರಾಮದ ಎಲ್ಲಾ ಸಾರ್ವಜನಿಕರು ಜೂ.18 ರಂದು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಪರಿಹಾರ ಕಂಡುಕೊಳ್ಳಬಹುದು. ಈ ಸಂದರ್ಭದಲ್ಲಿ ಸಾರ್ವಜನಿಕರು ಕೋವಿಡ್-19ರ ನಿಯಮಾವಳಿಯನ್ವಯ ಮಾಸ್ಕ ಧರಿಸಿ, ಸಾಮಾಜಿಕ ಅಂತರದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದಾವಣಗೆರೆ ತಹಶೀಲ್ದಾರ್ ಬಸನಗೌಡ ಕೋಟೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!