ತಾಂಡಾಗಳ ಅಭಿವೃದ್ಧಿಗೆ ಅನುದಾನ ನೀಡಿ : ಗಿರೀಶ್ ಡಿ. ಆರ್

WhatsApp Image 2022-03-09 at 14.34.41

ದಾವಣಗೆರೆ : ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮವು ರಾಜ್ಯದಲ್ಲಿನ ತಾಂಡಾಗಳ ಅಭಿವೃದ್ಧಿಯ ದೆಸೆಗೆ ಇರುವ ಏಕೈಕ ಸಾಧನ. ಇಂತಹ ಅಭಿವೃದ್ಧಿಗೆ ಪೂರಕವಾಗಿರುವ ತಾಂಡಾ ಅಭಿವೃದ್ಧಿ ನಿಗಮಕ್ಕೆ ಅನುದಾನ ಬರದಿರುವುದು ಬೇಸರದ ಸಂಗತಿ. ತ್ತೀಚಿನ ವರ್ಷಗಳಲ್ಲಿ ಸರ್ಕಾರವು ನಿಗಮಕ್ಕೆ ಸೂಕ್ತ ಅನುದಾನವನ್ನು ನೀಡದೆ ತಾಂಡಗಳ ಅಭಿವೃದ್ಧಿ ಕಡೆಗೆ ಗಮನ ಹರಿಸದೆ ನಿರ್ಲಕ್ಷ ವಹಿಸುತ್ತಿದೆ. ಹಾಗಾಗಿ ಇನ್ನು ಮುಂದಾದರೂ ತಾಂಡಾಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಬೇಕೆಂದು ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ. ಆರ್ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಮನವಿ ಮಾಡಿದರು. ಇದಕ್ಕೆ ಸ್ಪಂಧಿಸಿದ ಮುಖ್ಯಮಂತ್ರಿಗಳವರು ಕರ್ನಾಟಕ ರಾಜ್ಯದಲ್ಲಿನ ತಾಂಡಾಗಳ ಪ್ರಗತಿಗಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವ ಭರವಸೆ ನೀಡಿದರು ಎಂದು ಗಿರೀಶ್ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!