Guarantee: ಪಂಚಗ್ಯಾರಂಟಿ ಯೋಜನೆಗಳಿಗಾಗಿ ದಾವಣಗೆರೆ ಜಿಲ್ಲೆಗೆ 2256.15 ಕೋಟಿ ರೂ. ವೆಚ್ಚ ಗ್ಯಾರಂಟಿ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷರ ದಿನೇಶ್ ಗೂಳಿಗೌಡ
October 17, 2025
ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆ ಮನೆ ಮಾತಾಗಿವೆ. ಈ ಯೋಜನೆಗಳ ಕುರಿತು ರಾಷ್ಟ್ರೀಯ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವುದಲ್ಲದೇ, ಕಾಶ್ಮೀರದಿಂದ ಕನ್ಯಾ ಕುಮಾರಿವರೆಗೆ ಪಂಚಗ್ಯಾರಂಟಿ ಯೋಜನೆಗಳ ಬಗ್ಗೆ ಗುಣಗಾನ ಮಾಡುವುದರ ಮೂಲಕ ಪ್ರಶಂಸೆ ವ್ಯಕ್ತವಾಗುತ್ತಿವೆ. ನೆರೆ ರಾಜ್ಯಗಳು ಸಹ ನಮ್ಮ ರಾಜ್ಯದ ಯೋಜನೆಗಳ ಅನುಕರಿಸುವಂತಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಉದಾಸೀನ ತೋರದೇ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಮಾಜದ ಪ್ರತಿಯೊಬ್ಬ ನಾಗರೀಕನಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಬೇಕಿದೆ ಎಂದರು.
ಬೆಳಗ್ಗೆ 6ರಿಂದ ಪಡಿತರ ವಿತರಣೆ
ಜಿಲ್ಲಾ ಪಂಚಾಯತ್ ಸಿಇಓ ಮಾತನಾಡಿ, ಅನ್ನಭಾಗ್ಯ ಯೋಜನೆ ಪಡೆಯಲು ಸಾರ್ವಜನಿಕರಿಗೆ, ಕೂಲಿ ಕಾರ್ಮಿಕರಿಗೆ ತೊಂದರೆಯಾಗದಂತೆ ಬೆಳಗ್ಗೆ 6 ರಿಂದ ಸಂಜೆ 8ರವರೆಗೆ ಪಡಿತರ ವಿತರಣೆಗೆ ಸೂಚಿಸಿದರು.
ಯುವನಿಧಿ ಯೋಜನೆ ಬಗ್ಗೆ ಸಾಕಷ್ಟು ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲ. ಜಿಲ್ಲೆಯ ಶಾಲಾ- ಕಾಲೇಜುಗಳಲ್ಲಿ, ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಅಭಿಯಾನಗಳನ್ನು ಹಮ್ಮಿಕೊಳ್ಳುವ ಮೂಲಕ ವ್ಯಾಪಕ ಅರಿವು ಮೂಡಿಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಪ್ರಗತಿ
ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯಡಿ 2023ರ ಜೂನ್ ನಿಂದ 2025ರ ಸೆಪ್ಟೆಂಬರ್ ವರೆಗೆ 10.83 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಇದರ ವೆಚ್ಚವಾಗಿ 315.77 ಕೋಟಿ ಪ್ರಯಾಣ ವೆಚ್ಚ ಪಾವತಿ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಜುಲೈ 2023 ರಿಂದ ಡಿಸೆಂಬರ್ 2024ರ ವರೆಗೆ ಜಿಲ್ಲೆಯ 346.33 ಕೋಟಿ ಹಣವನ್ನು ಫಲಾನುಭವಿಗಳಿಗೆ ಪಾವತಿಸಲಾಗಿದೆ.
ಗೃಹಜ್ಯೋತಿಯಡಿ ಸೆಪ್ಟೆಂಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 511237 ಫಲಾನುಭವಿಗಳ ಸಂಖ್ಯೆಯಾಗಿದೆ. ಈ ಪೈಕಿ ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳಿಗೆ ರೂ.24.22 ಕೋಟಿ ಹೊಂದಾಣಿಕೆ ಮಾಡಲಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್ ನಿಂದ 2025ರ ಜೂನ್ವರೆಗೆ ನೊಂದಣಿಯಾದ 373827 ಫಲಾನುಭವಿಗಳಿಗೆ ರೂ.1472.60 ಕೋಟಿ ಪಾವತಿ ಮಾಡಲಾಗಿದೆ. ಹಾಗೆಯೇ 2023ನೇ ಸಾಲಿನಲ್ಲಿ ನೊಂದಣಿಯಾಗಿ ಇಲ್ಲಿಯವರೆಗೂ 3312 ಫಲಾನುಭವಿಗಳು ಮರಣ ಹೊಂದಿದ್ದಾರೆ. ಇದರಲ್ಲಿ 215 ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಯಿಂದ 25.60 ಲಕ್ಷ ಮೊತ್ತವನ್ನು ಸರ್ಕಾರಕ್ಕೆ ಮರುಪಾವತಿ ಮಾಡಲಾಗಿದೆ.
ಯುವನಿಧಿ ಯೋಜನೆಯಡಿ ಜಿಲ್ಲೆಯಾದ್ಯಂತ 9073 ಪದವಿ ಮತ್ತು 175 ಡಿಪ್ಲೋಮಾ ಪದವಿ ಫಲಾನುಭವಿಗಳು ಸೇರಿ ಒಟ್ಟು 9248 ವಿದ್ಯಾರ್ಥಿಗಳಿಗೆ 2025ರ ಜುಲೈ ಅಂತ್ಯಕ್ಕೆ 24.69 ಕೋಟಿ ಮೊತ್ತ ಪಾವತಿಸಲಾಗಿದೆ.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಮನೂರು ಟಿ ಬಸವರಾಜ್, ಉಪಾಧ್ಯಕ್ಷರಾದ ರಾಜೇಶ್ವರಿ, ಕೆ.ಎನ್. ಮಂಜುನಾಥ್, ನಂಜಾನಾಯ್ಕ, ಅನೀಶ್ ಪಾಷಾ ಸೇರಿದಂತೆ ಸಮಿತಿ ಸದಸ್ಯರು ವಿವಿಧ ಇಲಾಖೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.