ದಾವಣಗೆರೆ ಜಿಲ್ಲಾ ಕ ಸಾ ಪ ದಿಂದ, ಕುಂ.ಬಾ ಸದಾಶಿವಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ದಾವಣಗೆರೆ: ದಾವಣಗೆರೆ ಅವಿಭಜಿತ ಜಿಲ್ಲೆಯ ಹರಪನಹಳ್ಳಿ ತಾ ನವರಾದ ದಾವಣಗೆರೆ ಜಿಲ್ಲಾ 5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ, ಹಿರಿಯ ಸಾಹಿತಿಗಳು ಸಂಶೋಧಕರು ಆಗಿದ್ದ, ಶ್ರೀಯುತ ಕುಂ. ಬಾ.ಸದಾಶಿವಪ್ಪ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿರುವುದು ತುಂಬಾ ನೋವಿನ ಸಂಗತಿ. ಶ್ರೀಯುತರಿಗೆ ದಾವಣಗೆರೆ ಜಿಲ್ಲಾ ಕಸಾಪದ ಜಿಲ್ಲಾ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿ ಜಿಲ್ಲಾಧ್ಯಕ್ಷರಾದ, ಬಿ. ವಾಮದೇವಪ್ಪ, ಅವರು ಮೃತರ ಬಗ್ಗೆ ಮಾತನಾಡುತ್ತಾ ಅವರು ಸಾಹಿತ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಬಗ್ಗೆ ಗುಣಗಾನ ಮಾಡಿ,ಸಾಹಿತ್ಯ ಲೋಕದ ಒಂದು ಹಿರಿಯ ಕೊಂಡಿ ಕಳಚಿಕೊಂಡಂತಾಗಿದೆ ಎಂದು ಶೋಕ ವ್ಯಕ್ತಪಡಿಸಿದರು. ಅವರು ಅನೇಕ ಯುವ ಸಾಹಿತಿಗಳಿಗೆ ಮಾರ್ಗದರ್ಶಕರಾಗಿದ್ದರು ಎಂದು ಸ್ಮರಿಸಿಕೊಂಡರು. ಅವರ ಅಗಲಿಕೆಗಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಹಾಗೂ ಎಲ್ಲಾ ಕನ್ನಡದ ಮನಸ್ಸುಗಳ ಪರವಾಗಿ ಅಗಲಿದ ಚೇತನಕ್ಕೆ ಒಂದು ನಿಮಿಷ ಮೌನವನ್ನು ಆಚರಿಸುವುದರ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಬಾ. ಮ.ಬಸವರಾಜಯ್ಯ ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಬಿ. ದಿಳ್ಯಪ್ಪ ಇನ್ನು ಮುಂತಾದವರು ಉಪಸ್ಥಿತರಿದ್ದರು.