ನಾನೂ ಕೂಡ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿ – ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಕಿತ್ತಾಟ ನಡೆಯುತ್ತಿರುವ ಈ ಹೊತ್ತಲ್ಲಿಯೇ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಾನೂ ಕೂಡ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಹೇಳಿ ಕುತೂಹಲ ಕೆರಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಬಹುಮತ ಪಡೆದುಕೊಳ್ಳುವುದು ಖಚಿತವಾಗಿದ್ದು, ನಾನೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆಂದು ಹೈಕಮಾಂಡ್ ಗೆ ಕೇಳುತ್ತೇನೆ ಎಂದರು.
ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿಕೆಶಿಯಂತೆ ತಾವು ಕೂಡ ಪ್ರಬಲಾಕಾಂಕ್ಷಿಯಾಗಿದ್ದು, ಮತದಾರರು ಯಾರ ಪರ ಕೈಯೆತ್ತುತ್ತಾರೋ ಅವರೇ ಕೊನೆಗೆ ಸಿಎಂ ಆಗಲಿದ್ದಾರೆ. ನಾನು ಸಿಎಂ ಸ್ಥಾನ ಹೇಳುವುದರಲ್ಲಿ ತಪ್ಪೇನಿಲ್ಲ ಎಂದರು.