ರಾಜಕಾರಣದಲ್ಲಿ ಏನು ಆಗುತ್ತದೋ ಗೊತ್ತಿಲ್ಲ, ಆಪರೇಷನ್ ಕಮಲದ ಸುಳಿವು ನೀಡಿದ ಬೊಮ್ಮಾಯಿ

ರಾಜಕಾರಣದಲ್ಲಿ ಏನು ಆಗುತ್ತದೋ ಗೊತ್ತಿಲ್ಲ, ಆಪರೇಷನ್ ಕಮಲದ ಸುಳಿವು ನೀಡಿದ ಬೊಮ್ಮಾಯಿ

ದಾವಣಗೆರೆ: ರಾಜಕಾರಣದಲ್ಲಿ ಯಾವ ಸಮಯದಲ್ಲಿ ಏನು ಆಗುತ್ತದೋ ಗೊತ್ತಿಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.

ಬುಧವಾರ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಹುಟ್ಟುಹಬ್ಬದ ಆಚರಣೆ ಕಾರ್ಯಕ್ರಮಕ್ಕೆ ಆಗಮಿಸಿ, ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಅಜಿತ್ ಪವರ್ ಪ್ರಕರಣ ಉಲ್ಲೇಖಿಸಿ ಮಾತನಾಡಿದರು.ಕಾಂಗ್ರೆಸ್ ಸರ್ಕಾರ ಹೇಳಿದ್ದು ಒಂದು, ಮಾಡಿದ್ದು ಒಂದು. ಐದು ದೋಖಾಗಳನ್ನು ನೀಡಿ ಜನರಿಗೆ ಮೋಸ ಮಾಡಿದ್ದಾರೆ. ಈ ಮೋಸ ಸಹಿಸುವುದಿಲ್ಲ. ಅದ್ದರಿಂದ ಸದನದ ಒಳಗೆ ಹೊರಗೆ ಹೋರಾಟ ಮಾಡುತ್ತಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.

ಕೆಲವೇ ದಿನಗಳಲ್ಲಿ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ. ಕೇಂದ್ರ ನಾಯಕರು ಬೇರೆ ಬೇರೆ ರಾಜ್ಯಗಳ ನಿರ್ಣಯ ತೆಗೆದುಕೊಳ್ಳಬೇಕಿತ್ತು. ಈ ಹಿನ್ನೆಲೆಯಲ್ಲಿ ತಡವಾಗಿದೆ. ಈಗ ನಮ್ಮ ರಾಜ್ಯದ ಬಗ್ಗೆ ನಿರ್ಣಯ ತೆಗೆದುಕೊಳ್ಲಲಿದ್ದಾರೆ ಎಂದು ಹೇಳಿದರು. ಬಿಟ್ ಕಾಯನ್ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 40% ಕೇಸ್ ಬಗ್ಗೆ ತನಿಖೆ ನಡೆಸಿಲಿ ಅದರ ಜೊತೆ ಈಗಾಗಲೇ ಲೋಕಾಯುಕ್ತದಲ್ಲಿ ಕೆಲ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ.

2013 ರಿಂದ ಇಲ್ಲಿವೆರೆಗು ಎಲ್ಲಾ ಪ್ರಕರಣಗಳನ್ನು ತನಿಖೆ ನಡೆಸಲಿ. ಯಾವುದೋ ಒಂದು ಕೇಸ್ ಹಿಡಿದು ತನಿಖೆ‌ ನಡೆಸಬಾರದು ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು. ಸಿದ್ದೇಶಣ್ಣನ ಹುಟ್ಟು ಹಬ್ಬಕ್ಕೆ ನಾವು ಬಂದಿದ್ದೇವೆ. ಕಾರ್ಯಕ್ರಮ ಮುಗಿಸಿಕೊಂಡು ಮತ್ತೆ ಸದನಕ್ಕೆ ಹೋಗುತ್ತೇ‌ವೆ ಎಂದು ಬೊಮ್ಮಾಯಿ ಇದೇ ಸಂದರ್ಭದಲ್ಲಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!