ರಾಜ್ಯ ಸುದ್ದಿ

ಕಾಂಗ್ರೆಸ್ ಬಂದರೆ ಬಿಜೆಪಿ ಹಗರಣಗಳ ತನಿಖೆ, ಟೆಂಡರ್‌ಗಳು ರದ್ದು

ಬಾಗಲಕೋಟೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಹಗರಣಗಳ ತನಿಖೆಗೆ ಆಯೋಗ ರಚನೆ ಮಾಡಲಾಗುವುದು. ತಪ್ಪಿತಸ್ಥರು ಎಷ್ಟೇ ದೊಡ್ಡವರಿರಲಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ‌ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಕೊನೆ ಆರು ತಿಂಗಳ ಆಡಳಿತಾವಧಿಯಲ್ಲಿ ಕರೆದ ಟೆಂಡರ್ ರದ್ದು ಮಾಡಲಾಗುವುದು ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿಯೂ ಹಗರಣ‌ ನಡಿದಿವೆ‌ ಎನ್ನುತ್ತಾರೆ. 2008 ರಿಂದ ಇಲ್ಲಿಯವರೆಗಿನ ಆರೋಪಗಳ ಬಗ್ಗೆ ತನಿಖೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು. ಬಿ
ಜೆಪಿ ಸರ್ಕಾರದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಗೂಳಿಹಟ್ಟಿ ಶೇಖರ, ಎಚ್. ವಿಶ್ವನಾಥ ಅವರೇ ಆರೋಪ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನನ್ನ ರಾಜಕೀಯದಲ್ಲಿ ಜೀವನದಲ್ಲಿಯೇ ನೋಡಿಲ್ಲ ಎಂದು ಹೇಳಿದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!