Renukacharya;ಯಡಿಯೂರಪ್ಪನವರ ಕಡೆಗಣಿಸಿದ್ದೇ ಬಿಜೆಪಿಗೆ ಶಾಪ: ರೇಣುಕಾಚಾರ್ಯ ಗುಡುಗು

ದಾವಣಗೆರೆ, ಆ.29: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಯಲ್ಲಿ ಶಾಪವಾಗಿ ಪರಿಣಮಿಸಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ( M. P. Renukacharya) ಆಕ್ರೋಶ ಹೊರಹಾಕಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಲಾಯಿತು. ಇದರ ಪರಿಣಾಮ ಪಕ್ಷಕ್ಕೆ ಭಾರೀ ಹಾನಿಯಾಗಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ನಾವು ಕಾಂಗ್ರೆಸ್ ಪಕ್ಷವನ್ನು ಕರ್ನಾಟಕ ಮುಕ್ತ ಮಾಡುತ್ತೇವೆ, ಮುಕ್ತವಾಗಲಿದೆ ಎಂದು ಹೇಳಿದ್ದೆವು. ಆದರೆ ಇಂದು ನಮ್ಮ ಪಕ್ಷಕ್ಕೆ ಅದೇ ಪರಿಸ್ಥಿತಿ ಬಂದಿದೆ. ಬಿಜೆಪಿಯೇ ಕರ್ನಾಟಕದಿಂದ ಮುಕ್ತವಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಅವರು ಗುಡುಗಿದರು.

ಸರ್ಕಾರ ರಚನೆಯಾಗಿ 100 ದಿನ ಪೂರೈಸಿದರೂ ಅಕೃತ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಈ ಬೆಳವಣಿಗೆ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಮಾಡುವ ಆರೋಪಗಳಿಗೆ ನಾವು ಉತ್ತರ ಕೊಡಲಾಗದ ಸ್ಥಿತಿಗೆ ಬಂದಿದ್ದೇವೆ ಎಂದು ವಿಷಾದಿಸಿದರು.

Dasara; ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ

ಅಪಪ್ರಚಾರ ಮಾಡಲಾಗುತ್ತಿದೆ

ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ನಾನು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ತಲುಪಿಸುವ ಕೆಲಸ ನಾನು ಮಾಡಿದ್ದೇನೆ. ನಾನು ಬಿಜೆಪಿ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲ. ಬಿಜೆಪಿ ಕಚೇರಿಯಿಂದ ರೇಣುಕಾಚಾರ್ಯ ಕಾಂಗ್ರೆಸ್ ಸೇರುತ್ತಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದರು.

ನಾನು ಕ್ಷೇತ್ರದ ಸಮಸ್ಯೆಗಾಗೀ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರೆ ತಪ್ಪೇನು ಎಂದು ಪ್ರಶ್ನೆ ಮಾಡಿದ ಅವರು, ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದರಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮನಸ್ಸಿಗೆ ಬಹಳ ಬೇಸರವಾಗಿದೆ ಎಂದು ವಿಷಾದಿಸಿದರು.

transfer; ದಾವಣಗೆರೆ ಡಿ ಎಚ್ ಒ, ಆರ್ ಸಿ ಎಚ್ ಸೇರಿ ಒಂದೇ ದಿನ 600 ಕ್ಕೂ ಹೆಚ್ಚು ಆರೋಗ್ಯ ಇಲಾಖೆಯಲ್ಲಿ ವರ್ಗಾವಣೆ

ನನ್ನ ಮನಸ್ಸಿಗೆ ನೋವುಂಟಾಗಿದೆ

ಕೆಲವರು ಪತ್ರಿಕಾ ಹೇಳಿಕೆ ನೀಡುವ ಟೈಗರ್ಸ್ ಗಳಾಗಿದ್ದಾರೆ. ಪಕ್ಷ ನನಗೆ ತಾಯಿ ಸಮಾನ ಆದು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಕೆಲ ನಾಯಕರ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ ಅದನ್ನು ಖಂಡಿಸುತ್ತೇನೆ ಎಂದರು.

ರೇಣುಕಾಚಾರ್ಯ ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು. ನಾನು ಮಾತಾಡಿದ ತಕ್ಷಣ ರೇಣುಕಾಚಾರ್ಯ ಪಕ್ಷ ಬಿಡುತ್ತಾನೆಂದು ಹಬ್ಬಿಸುತ್ತಿದ್ದಾರೆ. ಯಾರು ರಾಜಕೀಯವಾಗಿ ಬೆಳೆಯುತ್ತಾರೋ ಅವರನ್ನು ಕತ್ತಿರುಸುತ್ತಾರೆ, ಯಾರು ಬಕೆಟ್ ಹಿಡಿಯುತ್ತಾರೋ ಅವರನ್ನು ಬೆಳೆಸುತ್ತಾರೆ ಎಂದು ಕಿಡಿಕಾರಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಹಾಗೂ ಶಾಸಕ ವಿಜಯೇಂದ್ರ ಅವರಿಗೆ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯವಿದೆ. ಆದರೆ ಅವರಿಗೆ ಅವಕಾಶ ಕೊಡುತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Leave a Reply

Your email address will not be published. Required fields are marked *

error: Content is protected !!