ಗುರುಕುಲ ರೆಸಿಡೆನ್ಸಿಯಲ್ ಶಾಲೆಯಲ್ಲಿ ಸ್ವಾತಂತ್ರೋತ್ಸವ

ದಾವಣಗೆರೆ: ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಜನ ಬೀದಿಗಿಳಿದು ತಮ್ಮ ಕುಟುಂಬ ಹಾಗೂ ವೈಯಕ್ತಿಕ ಜೀವನ ದೇಶಕ್ಕಾಗಿ ಮುಡುಪಿಟ್ಟಿದ್ದು, ಅವರ ತ್ಯಾಗ-ಬಲಿದಾನದಿಂದ ಸಿಕ್ಕಿರುವ ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಸಲಹೆ ನೀಡಿದರು.
ನಗರದ ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿರುವ ಗುರುಕುಲ ರೆಸಿಡೆಸ್ಸಿಯಲ್ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ ವ್ಯರ್ಥವಾಗದಂತೆ ನಾವೆಲ್ಲರೂ ಒಗ್ಗಟ್ಟಿನಿಂದ ಬದುಕಬೇಕು. ವಿವಿಧ ಧರ್ಮ, ಜಾತಿ, ಭಾಷೆಗಳಿಂದ ಕೂಡಿರುವ ನಮ್ಮ ದೇಶದಲ್ಲಿ ಸರ್ವಧರ್ಮಗಳನ್ನು ಗೌರವಿಸಬೇಕು. ಬಾಲ್ಯದಿಂದಲೇ ಸರ್ವಧರ್ಮ ಸಮನ್ವಯ ಭಾವ ಬೆಳೆಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಆರ್. ಅಬ್ದುಲ್, ಆಡಳಿತಾಧಿಕಾರಿ ನಸ್ರೀನ್ ಖಾನ್, ಪಿಯುಸಿ ವಿಭಾಗದ ಗುರುಕುಲ ಮೆಡಿಕಲ್ ಮತ್ತು ಐಐಟಿ ಅಕಾಡೆಮಿ ಪ್ರಾಂಶುಪಾಲ ಶ್ರೀನಿವಾಸ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ನಾಗರತ್ನ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರೇಖಾಪಾಟೀಲ್, ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಸಂದೀಪ್, ಸಂಯೋಜಕರಾದ ಸ್ನೇಹ, ಕಾಂಗ್ರೆಸ್ ಮುಖಂಡರುಗಳಾದ ಹೆಚ್. ಸುಭಾನ್ಖಾನ್, ಕೆ.ಎಂ. ಮಂಜುನಾಥ್, ಎಂ.ಕೆ. ಲಿಯಾಖತ್ ಅಲಿ, ವೀರಭದ್ರಪ್ಪ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.