ಭಾರತದ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯು ವಿಶ್ವದ ಆಕರ್ಷಣೆಯ ಕೇಂದ್ರವಾಗಿದೆ!ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಶಿವಮೊಗ್ಗ : ಭಾರತದ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯು ವಿಶ್ವದ ಆಕರ್ಷಣೆಯ ಕೇಂದ್ರವಾಗಿದೆ. ಭಾರತದ ಸಾಮರ್ಥ್ಯ ಮತ್ತು ಭಾರತದ ಪ್ರತಿಭೆ ಪ್ರಪಂಚದ ಪ್ರತಿಯೊಂದು ಹಂತದಲ್ಲೂ ಪ್ರತಿಧ್ವನಿಸುತ್ತಿದೆ ಎಂದು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ- 2020 21ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ. ನಮ್ಮ ದೇಶದ ಅಭಿವೃದ್ಧಿಯನ್ನು ಬಲಪಡಿಸಲು ಅಗತ್ಯವಾದ ಅವಶ್ಯಕತೆಗಳನ್ನು ಪೂರೈಸುವುದು ಇದರ ಗುರಿಯಾಗಿದೆ. ಕರ್ನಾಟಕದಲ್ಲಿ “ಹೊಸ ಶಿಕ್ಷಣ ನೀತಿ” ಯ ಪರಿಚಯದೊಂದಿಗೆ, “ಕ್ರೀಡೆ” ಯನ್ನು “ಕಡ್ಡಾಯ ಪಠ್ಯಕ್ರಮ” ದ ಭಾಗವಾಗಿ ಮಾಡಲಾಗಿದೆ. ಭಾರತದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಅನೇಕ ಪರಿಣಾಮಕಾರಿ ಯೋಜನೆಗಳನ್ನು ರೂಪಿಸಿದೆ ಮತ್ತು ಜಾರಿಗೊಳಿಸಿದೆ. ಅದರ ಫಲಿತಾಂಶ ಒಲಂಪಿಕ್ ಹಾಗೂ ಪ್ಯಾರಾ ಒಲಂಪಿಕ್ ನಲ್ಲಿ ಹೆಚ್ಚು ಪದಕಗಳನ್ನು ಗೆಲ್ಲಲಾಗಿದೆ ಎಂದರು.

ಕುವೆಂಪು ವಿಶ್ವವಿದ್ಯಾನಿಲಯವು ನಮ್ಮ ರಾಜ್ಯದ ಪ್ರಮುಖ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿದೆ, ಇದು ಶ್ರೇಷ್ಠ ಬರಹಗಾರ ಮತ್ತು ರಾಷ್ಟ್ರಕವಿ ಶ್ರೀ ಕುವೆಂಪು ಅವರ ಹೆಸರನ್ನು ಇಡಲಾಗಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಅವರಿಗೆ 1958 ರಲ್ಲಿ ‘ರಾಷ್ಟ್ರಕವಿ’ ಮತ್ತು 1992 ರಲ್ಲಿ ‘ಕರ್ನಾಟಕ ರತ್ನ’ ಬಿರುದು ನೀಡಲಾಯಿತು. ಅವರು ‘ವಿಶ್ವ ಮಾನವತಾವಾದ’ಕ್ಕೆ ಕೊಡುಗೆ ನೀಡಿದರು ಮತ್ತು ಕರ್ನಾಟಕ ರಾಜ್ಯ ಗೀತೆ ‘ಜೈ ಭಾರತ ಜನನಿಯ ತನುಜಾತೆ’ ಬರೆದ ಕುವೆಂಪು ಅವರ ಆದರ್ಶ ನಮ್ಮೆಲ್ಲರಿಗೆ ಪ್ರೇರಣೆ ಎಂದರು.

ಈ ವಿಶ್ವವಿದ್ಯಾನಿಲಯವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ ಮತ್ತು ವಿವಿಧ ಚಟುವಟಿಕೆಗಳಲ್ಲಿ ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ. ಘಟಿಕೋತ್ಸವದದಲ್ಲಿ ಗೌರವಾನ್ವಿತ ಶ್ರೀಮತಿ ಗೀತಾ ನಾರಾಯಣ್,  ಡಿ.ಹೆಚ್.ಶಂಕರಮೂರ್ತಿ, ಬಿ. ಎಂ.ಶ್ರೀಕಾಂತ್ ಮತ್ತು ಪ್ರೊ.ಕಟ್ಟಿಮನಿ,  ಮಹಾಂತೇಶ ಮತ್ತು  ಅರವಿಂದ್ ಅವರ ಅತ್ಯುತ್ತಮ ಕೊಡುಗೆಗಾಗಿ ಗೌರವ ಪದವಿಯನ್ನು ನೀಡಲಾಗಿದೆ. ಈ ಸಾಧಕರು ಇದೇ ರೀತಿ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಆಶಿಸುತ್ತೇನೆಂದರು.

ಗೌರವಾನ್ವಿತ ಪ್ರಧಾನಮಂತ್ರಿಯವರ ಶಿಕ್ಷಣ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳನ್ನು ಸಂಪರ್ಕಿಸುವ ಮೂಲಕ ನವ ಭಾರತ, ಶ್ರೇಷ್ಠ ಭಾರತ, ಸ್ವಾವಲಂಬಿ ಭಾರತವನ್ನು ಮಾಡಲು ಬದ್ಧರಾಗಿದ್ದಾರೆ. ಯುವ ಪೀಳಿಗೆ ಶ್ರೇಷ್ಠ ಭಾರತವನ್ನು ಸ್ವಾವಲಂಬಿ ಭಾರತವನ್ನಾಗಿ ಮಾಡುವಲ್ಲಿ ಭಾಗವಹಿಸುತ್ತೀರಿ ಎಂಬ ನಂಬಿಕೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.

ಭಾರತೀಯ ಶಿಕ್ಷಣ ವ್ಯವಸ್ಥೆಯು ಪ್ರಾಚೀನ ಕಾಲದಿಂದಲೂ “ವಸುಧೈವ ಕುಟುಂಬಕಂ” ತತ್ವಶಾಸ್ತ್ರದ ಮೇಲೆ ಕೇಂದ್ರೀಕೃತವಾಗಿದೆ. ದೇಶವು ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಎಂದು ಆಚರಿಸುತ್ತಿದೆ. ಸ್ವಾತಂತ್ರ್ಯ ಚಳವಳಿಯ ಇತಿಹಾಸದಂತೆ, 75 ವರ್ಷಗಳ ಪ್ರಯಾಣವು ಭಾರತೀಯರ ಕಠಿಣ ಪರಿಶ್ರಮ, ನಾವೀನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ ಎಂದರು.

ಸಿಎಫ್ ಟಿ ಆರ್ ಐ ನಿರ್ದೇಶಕರಾದ ಡಾ. ಶ್ರೀದೇವಿ ಎ ಸಿಂಗ್ ಅವರು ಮುಖ್ಯ ಅತಿಥಿಗಳ ಭಾಷಣ ಮಾಡಿದರು. ಕುಲಪತಿ ಪ್ರೊ. ವೀರಭದ್ರಪ್ಪ, ಕುಲಸಚಿವರಾದ ಅನುರಾಧ, ನವೀನ್ ಕುಮಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!