ಜೀವನದಲ್ಲಿ ಕ್ರೀಡೆ, ಶಿಸ್ತು,  ನಡೆನುಡಿಯನ್ನು ತೊಡಗಿಸಿಕೊಂಡಾಗ  ಕ್ರಿಯಾಶೀಲರಾಗಲು ಸಾಧ್ಯ: ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ ಜಿ.ಎಂ.

dc 01

ದಾವಣಗೆರೆ:- ಶಾಲಾ ಮಕ್ಕಳು ಕ್ರೀಡೆ, ಶಿಸ್ತು, ನಡೆನುಡಿ ಹಾಗೂ ಸೇವಾ ಮನೋಭಾವ ಮೂಡಿದಾಗ ಸದಾ ಕ್ರಿಯಾಶೀಲರಾಗಲು ಸಾಧ್ಯ  ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು (ನ.14) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಮತ್ತು ಗೈಡ್ಸ್, ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರ ಕೊಂಡಜ್ಜಿ, ಇಲ್ಲಿ ಹಮ್ಮಿಕೊಳ್ಳಾಗಿದ್ದ. ಕೊಂಡಜ್ಜಿ ಬಸಪ್ಪನವರ 42ನೇ ಪುಣ್ಯಸ್ಮರಣೆ ಹಾಗೂ ದಿ.ಶಾಮನೂರು ಕಲ್ಲಪ್ಪ ಸಾವಿತ್ರಮ್ಮ ಆಡಳಿತ ಕಚೇರಿಯ ನೂತನ ಕಟ್ಟಡ ಮತ್ತು ದಿ.ಎಂ.ಕೆ ಪಾಣಿ ಅತಿಥಿಗೃಹ ಕಟ್ಟಡಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ರಾಷ್ಟ್ರಭಕ್ತಿ, ನಾಡ ಭಕ್ತಿ ಬೆಳೆಸುವುದಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ ಮಾತನಾಡಿ ಈಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳ ಮೇಲೆ ತುಂಬಾ ಅವಲಂಭಿತರಾಗಿದ್ದಾರೆ. ಆದ್ದರಿಂದ ಇಂತಹ ಮಾಧ್ಯಮಗಳಿಗೆ ಹೆಚ್ಚು ಒತ್ತು ನೀಡುವ ಬದಲಿಗೆ ಸ್ಕೌಟ್ಸ್  ಮತ್ತು ಗೈಡ್ಸ್  ಅಭ್ಯಾಸದಲ್ಲಿ ತೊಡಗಿ ಕೊಂಡಾಗ ಮಾತ್ರ ಬಹುಮುಖ ಪ್ರತಿಭೆಗಳಾಗಿ ಹೊರಹೊಮ್ಮುತ್ತಾರೆ ಎಂದು ತಿಳಿಸಿದರು.

ನಮ್ಮ ಸುತ್ತಮುತ್ತಲಿನ ಸ್ನೇಹಿತರು, ಸಾರ್ವಜನಿಕರಿಗೆ. ಸ್ಕೌಟ್ಸ್ ಅಂಡ್ ಗೈಡ್ಸ್ ಮಹತ್ವದ ಬಗ್ಗೆ ತಿಳಿಸಬೇಕು ಎಂದು ಹೇಳಿದರು. ಹಾಗೂ ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ಸಿಕ್ಕಲ್ಲಿ ನಮಗೆ ತಿಳಿಸಬೇಕು ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತರು ಹಾಗೂ ಮಾಜಿ ಸಚಿವರಾದ ಪಿ.ಜಿ.ಆರ್ ಸಿಂಧ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೊಂಡಜ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕರಿಯಮ್ಮ, ಕೊಂಡಜ್ಜಿ ಬಸಪ್ಪ ಸ್ಕೌಟ್ಸ್-ಗೈಡ್ಸ್ ತರಬೇತಿ ಕೇಂದ್ರ ಅಭಿವೃದ್ದಿ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯ ಹಣಕಾಸು ಸಮಿತಿ ಸದಸ್ಯರು ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಖಜಾಂಚಿ ಡಾ.ಕೆ.ಬಿ ಗುರುಮೂರ್ತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಜಿಲ್ಲಾ ಮುಖ್ಯ ಆಯುಕ್ತರಾದ ಮುರುಘರಾಜೇಂದ್ರ.ಜೆ.ಚಿಗಟೇರಿ ಹಾಗೂ ಇತರರು ಭಾಗವಹಿಸಿದ್ದರು. ಸ್ಕೌಟ್ಸ್-ಗೈಡ್ಸ್ ತರಬೇತಿ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!