Jal Jeevan Mission: ಜೆಜೆಎಂ ಯೋಜನೆ ವೀಕ್ಷಣೆಗೆ ದಾವಣಗೆರೆಗೆ ವಿಶ್ವಬ್ಯಾಂಕ್ ಸದಸ್ಯರ ಬೇಟಿ

WhatsApp Image 2025-06-13 at 6.43.48 PM (1)

ದಾವಣಗೆರೆ (JAL Jeevan Mission)): ಜಿಲ್ಲೆಯಲ್ಲಿ 100 ಗ್ರಾಮಗಳನ್ನು 24*7 ನೀರು ಸರಬರಾಜು ಗ್ರಾಮಗನ್ನಾಗಿಸಲು  ಗುರಿ ಹೊಂದಿದ್ದು, ಈ ವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 13 ಗ್ರಾಮಗಳನ್ನು 24*7 ನೀರು ಸರಬರಾಜು ಗ್ರಮಗಳೆಂದು ಘೋಷಿಸಲಾಗಿದೆ.

ರಾಜ್ಯದಲ್ಲಿಯೇ ಅತೀ ಹೆಚ್ಚು ಗ್ರಾಮಗಳಿಗೆ ಈ ಯೋಜನೆಯನ್ನು ವಿಸ್ತರಿಸಿದ ಜಿಲ್ಲೆಗಳ ಪೈಕಿ ರಾಜ್ಯದಲ್ಲಿ ದಾವಣಗೆರೆ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಬ್ಯಾಂಕ್ ತಂಡದವರು ಜೆಜೆಎಂ ಯೋಜನೆಯಡಿ ಹೊನ್ನಾಳಿ ತಾಲೂಕಿನ ಹನಗವಾಡಿ ಗ್ರಾಮದಲ್ಲಿ ಅಳವಡಿಸಲಾದ ಜೆಜೆಎಂ ಯೋಜನೆಯಡಿ 24*7 ನೀರು ಸರಬರಾಜು ಕುರಿತು ಬೇಟಿ ನೀಡಿ ಮಾಹಿತಿ ಪಡೆದುಕೊಂಡರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದ್ದಾರೆ.


ಈ ವೇಳೆ ವಿಶ್ವಬ್ಯಾಂಕ್ ಟಾಸ್ಕ್ ಟೀಮ್ ಲೀಡರ್ ಮರಿಯಪ್ಪ ಕುಳ್ಳಪ್ಪ, ಕ್ರಿಸ್ಟೋಫರ್ ವಿಲಿಯಮ್ಸ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಭಿಯಂತರರು ಸಂಬಂಧಿಸಿದ ಅಧಿಕಾರಿಗಳು, ಚುನಾಯಿತ ಸದಸ್ಯರು ಇದ್ದರು

ಇತ್ತೀಚಿನ ಸುದ್ದಿಗಳು

error: Content is protected !!