yakshagana; ಕೆ.ರಾಘವೇಂದ್ರ ನಾಯರಿಗೆ “ಜನನಿ ಯಕ್ಷಗಾನ ರತ್ನ” ಪ್ರಶಸ್ತಿ

ದಾವಣಗೆರೆ, ಸೆ. 06: ಯಕ್ಷಗಾನ (yakshagana) ಕಲಾವಿದ ಕೆ.ರಾಘವೇಂದ್ರ ನಾಯರಿಯವರಿಗೆ ವಿಜಯನಗರ ಜಿಲ್ಲೆಯ ಹಗರಿಬೊಬ್ಬನಹಳ್ಳಿ ತಾಲೂಕಿನ ಹಂಪಾಪಟ್ಟಣದ ಜನನಿ ಸೇವಾ ಮತ್ತು ಸಾಂಸ್ಕೃತಿಕ ಸಂಘ(ರಿ.) ಮತ್ತು ಜನನಿ ಸೇವಾ ಟ್ರಸ್ಟ್ (ರಿ) ನ ವತಿಯಿಂದ ನೀಡಲಾಗುವ 2023 ರ ಸಾಲಿನ “ಜನನಿ ಯಕ್ಷಗಾನ ರತ್ನ” ರಾಜ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಶಾಲಾ ಕಾಲೇಜು ದಿನಗಳಲ್ಲೇ ಯಕ್ಷಗಾನ ಕಲಾವಿದರಾಗಿದ್ದ ಕೆ.ರಾಘವೇಂದ್ರ ನಾಯರಿಯವರು ಲಂಡನ್‌ನ ಮಾಂಚೆಸ್ಟರ್‌ನಲ್ಲಿ ನಡೆದ ವಿಶ್ವ ಕನ್ಮಡ ಸಮ್ಮೇಳನ ಸೇರಿದಂತೆ ದೇಶ ವಿದೇಶಗಳಲ್ಲಿ ಹಲವಾರು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ಜೊತೆಗೆ ಕಾರ್ಮಿಕ ನಾಯಕನಾಗಿ, ಕನ್ನಡ ಸಾಹಿತ್ಯ ಪರಿಷತ್ತು ಮುಂತಾದ ನಾನಾ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುವುದರ ಮೂಲಕ ಬಹುಮುಖ ಪ್ರತಿಭೆ ಮೆರೆದಿರುವ ಅವರಿಗೆ ಅರ್ಹವಾಗಿಯೇ “ಜನನಿ ಯಕ್ಷಗಾನ ರತ್ನ” ಪ್ರಶಸ್ತಿ ಸಂದಿದೆ.

vachana; ಶಿಕ್ಷಣ ಇಲಾಖೆಯಲ್ಲಿ ವಚನ ಸಾಹಿತ್ಯದ ಅವಗಣನೆ: ಸಾಣೇಹಳ್ಳಿ ಸ್ವಾಮೀಜಿ ಬೇಸರ

ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯ ಸಾನಿಧ್ಯವನ್ನು ಸಂಡೂರಿನ ಶ್ರೀ ಪ್ರಭುದೇವರ ಸಂಸ್ಥಾನ ವಿರಕ್ತ ಮಠದ ಪ್ರಭು ಮಹಾಸ್ವಾಮೀಜಿಯವರು ವಹಿಸಿದ್ದರು. ಹಂಪಿ‌ ಕನ್ನಡ ವಿಶ್ವವಿದ್ಯಾಲಯದ ಸಹಾಯಕ ಕುಲ ಸಚಿವ ಹಾಗೂ ಲೇಖಕ ಎಂ.ಎಂ.ಶಿವಪ್ರಕಾಶ್ ಸಮಾರಂಭವನ್ನು ಉದ್ಘಾಟಿಸಿ, ಸಾಧಕರಿಗೆ ನೀಡುವ ಪ್ರಶಸ್ತಿಗಳು ಅವರ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ಯಾವುದೇ ಲಾಭಿಯಿಲ್ಲದೇ ನೈಜವಾಗಿ ಸಾಧನೆಯನ್ನು ಗುರುತಿಸಿ ನೀಡಿದಾಗ ಪ್ರಶಸ್ತಿಯ ಗೌರವ ಹೆಚ್ಚಿಸುತ್ತದೆ. ಹಂಪಾಪಟ್ಟಣವು ರಾಜ್ಯದಲ್ಲೇ ಸಾಂಸ್ಕೃತಿಕ ಗ್ರಾಮವಾಗಿ ಹೆಸರು ಮಾಡಿದೆ. ಇಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತವೆ. ಇಲ್ಲಿನ ಅನೇಕ ಕಲಾವಿದರು ರಾಜ್ಯ ಮಟ್ಟದ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಹಲವಾರು ಕಲಾವಿದರು, ಸಾಹಿತಿಗಳು, ಹೋರಾಟಗಾರರು, ಪತ್ರಕರ್ತರು ಮತ್ತು ವಿಜ್ಞಾನಿಗಳನ್ನು ನಾಡಿಗೆ ನೀಡಿದ ಈ ಗ್ರಾಮದ ಮಣ್ಣಿನ ಗುಣ ವೈಶಿಷ್ಟ್ಯಪೂರ್ಣವಾಗಿದೆ ಎಂದು ಬಣ್ಣಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಗೌರವಾಧ್ಯಕ್ಷ ಆರ್.ಖಾಜಾ ಹುಸೇನ್ ಸಾಬ್ ವಹಿಸಿದ್ದರು ಹಾಗೂ ಟ್ರಸ್ಟ್‌ನ ಅಧ್ಯಕ್ಷ ಎ.ಕೇಶವಮೂರ್ತಿ, ತಾಲೂಕು ಕರವೇ ಅಧ್ಯಕ್ಷ ಬುಡ್ಡಿ ಬಸವರಾಜ್, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಪಿ.ಎಂ.ಮಂಜುನಾಥ್, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ.ಆನಂದಮೂರ್ತಿ ಹಾಗೂ ಪದಾಧಿಕಾರಿಗಳಾದ ವಿಶ್ವನಾಥ್ ಬಿಲ್ಲವ, ಕೆ.ಶಶಿಶೇಖರ್, ರಾಜ್ಯ ಬೀಜ ನಿಗಮದ ಅಧಿಕಾರಿ ನಾಗರಕಟ್ಟೆ ಎಸ್.ರಾಜೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಯಕ್ಷಗಾನ ಕಲಾವಿದ ಕೆ.ರಾಘವೇಂದ್ರ ನಾಯರಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಸಾಧಕರಿಗೆ ಜನನಿ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

error: Content is protected !!