ಜಿಲ್ಲೆಯಾದ್ಯಂತ ಉತ್ತಮ ಮಳೆ

IMG_20210718_152058

ದಾವಣಗೆರೆ,ಜು, 18: ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ರಾತ್ರಿ ಸುರಿದ ಭಾರೀ ಮಳೆಗೆ ಹಳ್ಳಕೊಳ್ಳಗಳು, ಕೆರೆ ಕಟ್ಟೆಗಳು ತುಂಬಿ ನೂರಾರು ಎಕರೆ ಜಲಾವೃತಗೊಂಡಿದೆ.


ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ಹಾಗೂ ಜಗಳೂರು ಸೇರಿದಂತೆ ಜಿಲ್ಲೆಯ ಎಲ್ಲೆಡೆ ರಾತ್ರಿಪೂರ್ತಿ ಮಳೆ ಸುರಿದಿದ್ದು, ಜನರಿಗೆ ಸಮಸ್ಯೆಯಾಗಿದೆ.

ಕೆಲವೆಡೆ ಪ್ರವಾಹ ಭೀತಿ ತಲೆದೋರಿದೆ. ತುಂಗಾ ನದಿಯ ಹೊರಹರಿವಿನಲ್ಲಿಯೂ ಹೆಚ್ಚಳವಾಗಿದ್ದು, ಗಾಜನೂರು ಡ್ಯಾಂನಿಂದ ನೀರು ಹೊರಬಿಡಲಾಗುತ್ತಿದೆ. ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಹೊನ್ನಾಳಿ, ಹರಿಹರ ಮೂಲಕ ಹಾದು ಹೋಗುವ ಈ ನದಿಯಲ್ಲೀಗ ನೀರೋ‌ ನೀರು.

ಜಗಳೂರುರಿನ ಕಾಡಜ್ಜಿಯಲ್ಲಿ ಗ್ರಾಮದಲ್ಲಿ KEB ಕಚೇರಿ ಹಾಗೂ ಕೃಷಿ ಕೇಂದ್ರ ಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಅಲ್ಲದೆ
ದಾವಣಗೆರೆ ತಾಲೂಕಿನ ಮಾಗನಹಳ್ಳಿ ಗ್ರಾಮದಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಅಪಾಯವಾದರೂ ಈ ರಸ್ತೆಯಲ್ಲಿ ಜನರು ಸಂಚಾರ ಮಾಡುತ್ತಿರುವುದು ಕಂಡು ಬರುತ್ತಿದೆ. ಬೈಕ್ ಸವಾರರು ಕಷ್ಟಪಟ್ಟುಕೊಂಡೇ ಹೋಗುತ್ತಿರುವುದು ಕಂಡು ಬರುತ್ತಿದೆ.

ಇನ್ನು ಕೊಂಡಜ್ಜಿ‌, ತುಪ್ಪದಹಳ್ಳಿ, ಹಿರೇಮೇಗಳಗೇರೆ ಕೆರೆ ಸೇರಿದಂತೆ ಹಲವು ಕೆರೆಗಳು ತುಂಬಿವೆ. ಇನ್ನು ಒಂದೆಡೆ ಮಳೆ ಬಂದು ನೀರು ಹೆಚ್ಚಾಗಿ ಬರುತ್ತಿದ್ದರೂ ಕೆಲವೆಡೆ ಬೆಳೆದಿದ್ದ ಬೆಳೆ ನೀರು ಪಾಲಾಗಿರುವುದು ರೈತರ ಆತಂಕಕ್ಕೆ‌ ಕಾರಣವಾಗಿದೆ. ಕೆರೆಗಳಿಗೆ ಒಂದೇ ದಿನ ಹತ್ತು ಅಡಿಗೂ ಹೆಚ್ಚು ನೀರು ಹರಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!