ಖ್ಯಾತ ನಟ ಪುನೀತ್ ನಿಧನ, ಕಂಬನಿ ಮಿಡಿದ ಸಚಿವ ಕೆ.ಎಸ್. ಈಶ್ವರಪ್ಪ

ದಾವಣಗೆರೆ: ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ.
ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
ಎಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ
ಶ್ರೀ ಕೆ.ಎಸ್.ಈಶ್ವರಪ್ಪ ರವರು
ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.