ಕಾಗಿನೆಲೆ ಪೀಠದ ಮೈಲಾರದಲ್ಲಿ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿದ ಸಚಿವರು

IMG-20210718-WA0012

 

ದಾವಣಗೆರೆ: ಶ್ರೀ ಕಾಗಿನೆಲೆ ಕನಕ ಗುರುಪೀಠದ ಮೈಲಾರದ ಶಾಖಾ ಮಠದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಕನಕ ಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಸ್ವಾಮಿಗಳ ಮಾರ್ಗದರ್ಶನದಲ್ಲಿ ಕಟ್ಟಡಕ್ಕೆ ಭೂಮಿಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪ, ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ, ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ಆರ್. ಶಂಕರ್, ಮಾಜಿ ಸಚಿವರಾದ ಎಚ್.ಎಮ್.ರೇವಣ್ಣ, ಮಾಜಿ ಸಂಸದರಾದ ಕೆ.ವಿರೂಪಾಕ್ಷಪ್ಪ ಸೇರಿದಂತೆ ಹಲವು ಗಣ್ಯರು ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!