ಮೇ.4 ರಂದು ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್.ಎಸ್.ಮಲ್ಲಿಕಾರ್ಜುನ ಪರ ಕನ್ಹಯ್ಯ ಕುಮಾರ್ ರೋಡ್ ಷೋ,

ಮೇ.4 ರಂದು ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್.ಎಸ್.ಮಲ್ಲಿಕಾರ್ಜುನ ಪರ ಕನ್ಹಯ್ಯ ಕುಮಾರ್ ರೋಡ್ ಷೋ,

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಮತ್ತು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಪರವಾಗಿ ಮೇ.4 ರ ಗುರುವಾರದಂದು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಕನ್ನಯ್ಯಕುಮಾರ್ ಅವರು ರೋಡ್ ಷೋ ಮತ್ತು ಚುನಾವಣಾ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಮೇ.4ರ ಬೆಳಿಗ್ಗೆ 11 ಗಂಟೆಯಿಂದ ದಾವಣಗೆರೆಯ ಅರಳಿಮರ ಸರ್ಕಲ್‍ನಿಂದ ಪ್ರಾರಂಭವಾಗುವ ರೋಡ್ ಷೋ ಹಳೇ ಬೇತೂರು ರಸ್ತೆ, ಮದೀನಾ ಸರ್ಕಲ್, ಆಜಾದ್ ನಗರ ಮುಖ್ಯರಸ್ತೆ, ಬಾಷಾನಗರ ಮೂಲಕ ಅಖ್ತರ್ ರಜಾ ಸರ್ಕಲ್ ವರೆಗೆ ನಡೆಸುವರು.

ನಂತರ ಬೂದಾಳ್ ರಸ್ತೆಯ ಗೋಲ್ಡನ್ ಪ್ಯಾಲೇಸ್‍ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ.

ಆದ ಕಾರಣ ಮಹಾನಗರ ಪಾಲಿಕೆಯ ಎಲ್ಲಾ ಕಾಂಗ್ರೆಸ್ ಸದಸ್ಯರುಗಳು, ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್, ಎನ್‍ಎಸ್‍ಯುಐ, ಮಹಿಳಾ ಕಾಂಗ್ರೆಸ್, ಅಲ್ಪಸಂಖ್ಯಾತರ ವಿಭಾಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಓಬಿಸಿ, ಕಾರ್ಮಿಕ ವಿಭಾಗ, ಅಸಂಘಟಿಕ ಕಾರ್ಮಿಕ ವಿಭಾಗಗಳು ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!