ರಾಜ ರಾಜೇಶ್ವರಿ ವಿದ್ಯಾರ್ಥಿನಿಯರಿಗೆ ಕನ್ನಡ ಕೌಸ್ತುಭ ಪ್ರಶಸ್ತಿ ಪ್ರದಾನ

ರಾಜ ರಾಜೇಶ್ವರಿ ವಿದ್ಯಾರ್ಥಿನಿಯರಿಗೆ ಕನ್ನಡ ಕೌಸ್ತುಭ ಪ್ರಶಸ್ತಿ ಪ್ರದಾನ
ದಾವಣಗೆರೆ : 2022 – 23 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ದಲ್ಲಿ ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕ ಗಳಿಸಿದ್ದ ಮಲೇಬೆನ್ನೂರು ಪಟ್ಟಣದ ಜಿಗಳಿ ರಸ್ತೆಯಲ್ಲಿರುವ ಒಡೆಯರ್ ಬಸಾಪುರದ ಪಟೇಲ್ ಬಸಪ್ಪ ಎಜುಕೇಶನ್ ಅಸೋಸಿಯೇಶನ್ ನ ರಾಜ ರಾಜೇಶ್ವರಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯರಾದ ಗೌರಿಕಾ, ವರ್ಷಾ ಚೌಧರಿ , ರಮ್ಯಾ ಎಂ ಎಸ್ , ಅನುಷಾ ಜಿ ಎಂ ಅವರಿಗೆ ದಾವಣಗೆರೆ ಪಾರ್ವತಮ್ಮ ಶಾಮನೂರು ಶಿವ ಶಂಕರಪ್ಪ ಸಮುದಾಯ ಭವನದಲ್ಲಿ ದಿನಾಂಕ : 30/07/2023 ರ ಬೆಳಿಗ್ಗೆ 11 ಗಂಟೆಗೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಖ್ಯಾತ ಚಲನಚಿತ್ರ ನಿರ್ದೇಶಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಟಿ ಎಸ್ ನಾಗಭರಣ ಸಮ್ಮುಖದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡ ಕೌಸ್ತುಭ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು .
ರಾಜ ರಾಜೇಶ್ವರಿ ವಿದ್ಯಾರ್ಥಿನಿಯರಿಗೆ ಕನ್ನಡ ಕೌಸ್ತುಭ ಪ್ರಶಸ್ತಿ ಪ್ರದಾನ
ಪ್ರಶಸ್ತಿ ಪುರಸ್ಕೃತ ಎಲ್ಲಾ ವಿದ್ಯಾರ್ಥಿನಿಯರಿಗೆ ರಾಜ ರಾಜೇಶ್ವರಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಶಿವಾನಂದಪ್ಪ ಜಿ ಬಿ, ಪ್ರಾಂಶುಪಾಲರಾದ ಸುಜಾತ ಜಿ ಓ, ಮುಖ್ಯೋಪಾಧ್ಯಾಯರಾದ ಶಶಿಧರ್ ಎಸ್ ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ ರಾಜೇಶ್ವರಿ ವಿದ್ಯಾರ್ಥಿನಿಯರಿಗೆ ಕನ್ನಡ ಕೌಸ್ತುಭ ಪ್ರಶಸ್ತಿ ಪ್ರದಾನ

Leave a Reply

Your email address will not be published. Required fields are marked *

error: Content is protected !!