ಅಚ್ಚ ಕನ್ನಡದಲ್ಲಿ ಮಾತಡಿದವರಿಗೆ 5 ಸಾವಿರ ಬಹುಮಾನ!!

ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ’ಕನ್ನಡಕ್ಕಾಗಿ ನಾವು’ ಅಭಿಯಾನದಡಿ ಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯನ್ನು ಆಯೋಜಿಸಿದ್ದು, ಜಿಲ್ಲಾ ಮಟ್ಟದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ.
ಸ್ಪರ್ಧೆಯಲ್ಲಿ ಅನ್ಯ ಭಾಷೆಯ ಪದಗಳನ್ನು ಬಳಸದೆ ನಾಡು-ನುಡಿಗೆ ಸಂಬಂಧಿಸಿದಂತೆ ೩ ರಿಂದ ೪ ನಿಮಿಷಗಳ ಕಾಲ ಶುದ್ಧ ಕನ್ನಡದಲ್ಲಿ ಮಾತನಾಡಬೇಕು. ಸಾರ್ವಜನಿಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದು ಹಾಗೂ ಆಸಕ್ತರು https://forms.gle/CRfQAZonSGQh83Sf7 ಗೂಗಲ್ ಲಿಂಕ್ ಮೂಲಕ ಭಾಗವಹಿಸಬಹುದಾಗಿದೆ.
ಸ್ಪರ್ಧೆಗೆ ಜಿಲ್ಲಾ ಮಟ್ಟದಲ್ಲಿ ಮೊದಲ ಬಹುಮಾನ ೫ ಸಾವಿರ, ದ್ವಿತೀಯ ೩ ಸಾವಿರ ಹಾಗೂ ತೃತೀಯ ಬಹುಮಾನ ೨ ಸಾವಿರ ರೂ.ಗಳನ್ನು ನಿಗದಿಗೊಳಿಸಲಾಗಿದೆ. ಜಿಲ್ಲಾ ಹಂತದಲ್ಲಿ ಸರ್ಕಾರವು ಮೌಲ್ಯಮಾಪನ ಸಮಿತಿಯನ್ನು ನಿಗದಿಗೊಳಿಸಿದ್ದು, ಈ ಸಮಿತಿಯು ವಿಜೇತರನ್ನು ಆಯ್ಕೆ ಮಾಡುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.