ಕಟ್ಟಡ ಕಾರ್ಮಿಕ ಸಂಘಟನೆಗಳ ಹೋರಾಟಕ್ಕೆ‌ ಜಯ: ಕೊವೀಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ಆದೇಶವನ್ನು ಹಿಂಪಡೆದ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ

IMG-20210910-WA0006

 

ದಾವಣಗೆರೆ: ಬೆಂಗಳೂರು ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೊವೀಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ಆದೇಶವನ್ನು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ರದ್ದುಗೊಳಿಸಿರುವುದನ್ನು ಸಿ.ಐ.ಟಿ.ಯು. ಸಂಯೋಜಿತ ಸಂಘಟನೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸ್ವಾಗತಿಸಿದೆ.

ಕಟ್ಟಡ ಕಾರ್ಮಿಕ ಮಂಡಳಿಯು ಇತ್ತೀಚಿಗೆ ರಾಜ್ಯದಲ್ಲಿರುವ 30 ಲಕ್ಷ ಕಟ್ಟಡ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಕೊವೀಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ ಗೆ 780 ರೂ., ದರವನ್ನು ನಿಗದಿಪಡಿಸಿತ್ತು. ಇದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳು ತೀವ್ರ ಹೋರಾಟವನ್ನು ನಡೆಸಿ ಕಟ್ಟಡ ಕಾರ್ಮಿಕ ಕಲ್ಯಾಣಕ್ಕಾಗಿ ಮೀಸಲಿಟ್ಟ‌ ಸೆಸ್ ಹಣವನ್ನು ರಾಜ್ಯದ 400 ಖಾಸಗಿ ಆಸ್ಪತ್ರೆಗಳಿಗೆ ನೀಡುವ ತೀರ್ಮಾನ ಕೈ ಬಿಡುವಂತೆ ಆಗ್ರಹಪಡಿಸಿದ್ದವು ಎಂದು ಸಿಐಟಿಯು ಜಿಲ್ಲಾ ಸಂಚಾಲಕ ಆನಂದರಾಜು ಕೆ.ಹೆಚ್ ತಿಳಿಸಿದ್ದಾರೆ.

ಕಾರ್ಮಿಕರ ಹೋರಾಟದಿಂದ ಕಲ್ಯಾಣ ಮಂಡಳಿ ತನ್ನ ತೀರ್ಮಾನದಿಂದ ಹಿಂದೆ ಸರಿದಿದ್ದು, ಎಲ್ಲ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೂ ಸರ್ಕಾರದ ವತಿಯಿಂದಲೇ ಉಚಿತ ಲಸಿಕೆ ನೀಡುವುದಾಗಿ ಪ್ರಕಟಿಸಿತ್ತು. ಆದರೆ, ಅದಾಗಲೇ ಬೆಂಗಳೂರಿನ ಆರು ಕಾರ್ಮಿಕ ಉಪವಿಭಾಗ ವ್ಯಾಪ್ತಿಯಲ್ಲಿ 2ಲಕ್ಷ ಲಸಿಕೆಗಳನ್ನು ನೀಡಲು ಮಂಡಳಿಯಿಂದ 15.60 ಕೋಟಿ ರೂ., ನೀಡಿ ಆದೇಶಿಸಲಾಗಿತ್ತು.

ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಫೆಡರೇಶನ್ ಒತ್ತಾಯಿಸಿತ್ತು. ಇದೀಗ ಮಂಡಳಿ ಖಾಸಗಿ ಆಸ್ಪತ್ರೆಗಳ ಒಕ್ಕೂಟವಾದ ಫನಾ(PHANA) ಗೆ ಕಳಿಸಲಾದ ಆದೇಶದಲ್ಲಿ ರಾಜ್ಯ ನಿರ್ಧಾರವಾಗಿದೆ, ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕ ಉಚಿತವಾಗಿ ಲಸಿಕೆ ಆನಂದರಾಜು ಕೆ.ಹೆಚ್. ಸ್ವಾಗತಾರ್ಹ ನಡೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!