Kirik Keerthi: ಕಿರಿಕ್ ಕೀರ್ತಿ ಮೇಲೆ ಪಬ್​​ನಲ್ಲಿ ಬಿಯರ್ ಬಾಟಲಿಯಿಂದ ಹಲ್ಲೆ.!

Kirik Keerthi kirik

ಬೆಂಗಳೂರು: ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್​​ನಲ್ಲಿ ಫೋಟೋ ತೆಗೆದ ವಿಚಾರವಾಗಿ ಮಾತಿನ ಚಕಮಕಿಯಾಗಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಕಿರಿಕ್ ಕೀರ್ತಿ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ.

ಗುರುವಾರ ತಡರಾತ್ರಿ ಸದಾಶಿವನಗರ ಬಳಿಯ ಹ್ಯಾಮರ್ಡ್​​ ಕ್ಲಬ್​​ನಲ್ಲಿ ಕಿರಿಕ್ ಕೀರ್ತಿ ಹಾಗೂ ಸ್ನೇಹಿತರು ಮದ್ಯಸೇವನೆಯಲ್ಲಿ ತೊಡಗಿದ್ದರು‌. ಇದೇ ವೇಳೆ ಪಕ್ಕದ ಟೇಬಲ್​ನಲ್ಲಿದ್ದ ಮತ್ತೊಂದು ಗುಂಪಿನ ಸದಸ್ಯನೋರ್ವ ಮೊಬೈಲ್​​ನಲ್ಲಿ ಫೋಟೊ ತೆಗೆದಿದ್ದಾನೆ. ಇದನ್ನು ಕೀರ್ತಿ ಪ್ರಶ್ನಿಸಿದ್ದಾರೆ. ಈ ವೇಳೆ, ಇಬ್ಬರ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು.

ಇದೇ ವೇಳೆ, ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ಬಿಯರ್ ಬಾಟಲಿಯಿಂದ ಕಿರಿಕ್‌ ಕೀರ್ತಿ ತಲೆಗೆ ಹೊಡೆದು ಗಾಯಗೊಳಿಸಿದ್ದಾನೆ‌‌. ಆಸ್ಪತ್ರೆಯೊಂದರಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿರುವ ಅವರು, ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!