ಕಿಸಾನ್ ಸಮ್ಮಾನ್ `ಇ-ಕೆವೈಸಿ’ ಮೇ 22 ರವರೆಗೆ ವಿಸ್ತರಣೆ

1

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಯೋಜನೆ 2021ರಲ್ಲಿ ಕೇಂದ್ರ ಸರ್ಕಾರವು ದೊಡ್ಡ ಬದಲಾವಣೆಯನ್ನು ಮಾಡಿದೆ. ಅದರ ಪ್ರಕಾರ, ರೈತರು 11ನೇ ಕಂತಿಗೆ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಅಂದರೆ, ಈಗ 11ನೇ ಕಂತಿಗೆ ರೈತರು ಹಲವು ಹೊಸ ನಿಯಮಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಅಡಿಯಲ್ಲಿ ಈಗ ರೈತರು 11ನೇ ಕಂತುಗಾಗಿ ಕಾಯುತ್ತಿದ್ದಾರೆ. ಇದುವರೆಗೆ ಈ ಯೋಜನೆಯ 10 ಕಂತುಗಳು ಈಗಾಗಲೇ ರೈತರ ಖಾತೆಗೆ ಬಂದಿದೆ. ಆದ್ರೆ 11ನೇ ಕಂತಿನ ಹಣ ಪಡೆಯಲು ಕೇಂದ್ರ ಸರ್ಕಾರವು ಈಗ ಇ-ಕೆವೈಸಿ (eKYC) ಯನ್ನು ಪೂರ್ಣಗೊಳಿಸಬೇಕಾಗುತ್ತದೆ.

ಯೋಜನೆಯ ಪ್ರಯೋಜನಗಳನ್ನು ಪಡೆಯಲು ಕೇಂದ್ರ ಸರ್ಕಾರವು ಈಗ eKYC ಗಡುವನ್ನು ವಿಸ್ತರಿಸಿದೆ. ಈ ಮಾಹಿತಿಯನ್ನು ಪಿಎಂ ಕಿಸಾನ್ ಪೋರ್ಟಲ್ (pmkisan.gov.in) ನಲ್ಲಿ ನೀಡಲಾಗಿದೆ. ಮಾಹಿತಿಯ ಪ್ರಕಾರ, ಈಗ eKYC ಅನ್ನು ಮೇ 22, 2022 ರವರೆಗೆ ಪೂರ್ಣಗೊಳಿಸಬಹುದು. ಈ ಮೊದಲು ಅದರ ಗಡುವು ಮಾರ್ಚ್ 31, 2022 ಆಗಿತ್ತು.

ಇ-ಕೆವೈಸಿ ಇಲ್ಲದೆ ನಿಮಗೆ ಹಣ ಲಭ್ಯವಾಗುವುದಿಲ್ಲ. ಶೀಘ್ರದಲ್ಲೇ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11ನೇ ಕಂತು ಕೂಡ ಬಿಡುಗಡೆಯಾಗಲಿದೆ. ಆಧಾರ್ ಆಧಾರಿತ OTP ದೃಢೀಕರಣಕ್ಕಾಗಿ, ರೈತರು ಕಿಸಾನ್ ಕಾರ್ನರ್‌ನಲ್ಲಿ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಬೇಕಾಗುತ್ತದೆ ಎಂದು ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ತಿಳಿಸಲಾಗಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಒಬ್ಬರು ಹತ್ತಿರದ ಸಿಎಸ್‌ಸಿ ಕೇಂದ್ರಕ್ಕೆ ಭೇಟಿ ನೀಡಬೇಕು. ನಿಮ್ಮ ಮೊಬೈಲ್, ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್‌ನಿಂದಲೂ ನೀವು ಮನೆಯಲ್ಲಿ ಕುಳಿತು ಈ ಕೆಲಸವನ್ನು ಮಾಡಬಹುದು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!